ದೇಶ

ಮಹಾರಾಷ್ಟ್ರದ ಜಲ್ನಾದಲ್ಲಿ ಭೀಕರ ಅಪಘಾತ: ಆರು ಮಂದಿ ಸಾವು, 17 ಜನರಿಗೆ ಗಾಯ

ವಾಡಿಗೋದ್ರಿ-ಜಲನಾ ಮಾರ್ಗದ ಶಹಾಪುರ ಬಳಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ಬಸ್‌ನ ಗಾಜುಗಳನ್ನು ಒಡೆದು ಗಾಯಾಳುಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಲ್ನಾ: ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಇಂದು ಶುಕ್ರವಾರ ಬೆಳಗ್ಗೆ ರಾಜ್ಯ ಸಾರಿಗೆ ಬಸ್ ಮತ್ತು ಖಾಸಗಿ ಟ್ರಕ್ ಮಧ್ಯೆ ಡಿಕ್ಕಿ ಹೊಡೆದು ಆರು ಜನರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಡಿಗೋದ್ರಿ-ಜಲನಾ ಮಾರ್ಗದ ಶಹಾಪುರ ಬಳಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ಬಸ್‌ನ ಗಾಜುಗಳನ್ನು ಒಡೆದು ಗಾಯಾಳುಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ಸಾರಿಗೆ ಬಸ್ ಗೆವ್ರಾಯ್‌ನಿಂದ ಜಲ್ನಾಗೆ ತೆರಳುತ್ತಿದ್ದಾಗ, ಕಿತ್ತಳೆ ಹಣ್ಣುಗಳನ್ನು ಹೊತ್ತ ಟ್ರಕ್ ಅಂಬಾಡ್‌ನಿಂದ ಬರುತ್ತಿತ್ತು. ಸ್ಥಳೀಯರ ಸಹಾಯದಿಂದ ಪೊಲೀಸರು ಗಾಯಾಳುಗಳನ್ನು ರಕ್ಷಿಸಿ ಅಂಬಾದ್ ಮತ್ತು ಜಲ್ನಾ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಅಪಘಾತಕ್ಕೆ ಕಾರಣ ಇತ್ಯಾದಿಗಳ ಬಗ್ಗೆ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT