ಅಸಾದುದ್ದೀನ್ ಓವೈಸಿ online desk
ದೇಶ

ನಿಮಗೆ ಇಸ್ಲಾಮೋಫೋಬಿಯಾದ ಸಮಸ್ಯೆ ಇದೆ: ಮದರಸಾಗಳ ಕುರಿತು ಕೇಂದ್ರ ಸಚಿವರ ಹೇಳಿಕೆಗೆ ಓವೈಸಿ ಪ್ರತಿಕ್ರಿಯೆ!

ಮದರಸಾಗಳು ತನ್ನ ವಿದ್ಯಾರ್ಥಿಗಳಿಗೆ AK-47 ರೈಫಲ್ ಗಳ ತರಬೇತಿ ನೀಡುತ್ತಿದೆ ಎಂದು ಬಂಡಿ ಸಂಜಯ್ ಹೇಳಿದ್ದರು.

ಹೈದರಾಬಾದ್: ಮದರಸಾಗಳ ಬಗ್ಗೆ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ವಿರುದ್ಧ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

ಮದರಸಾಗಳು ತನ್ನ ವಿದ್ಯಾರ್ಥಿಗಳಿಗೆ AK-47 ರೈಫಲ್ ಗಳ ತರಬೇತಿ ನೀಡುತ್ತಿದೆ ಎಂದು ಬಂಡಿ ಸಂಜಯ್ ಹೇಳಿದ್ದರು. ಎಐಎಂಐಎಂ ಕೇಂದ್ರ ಕಚೇರಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಮುಸ್ಲಿಮರೆಡೆಗೆ ಸಚಿವರಿಗೇಕೆ ಅಷ್ಟೋಂದು ಕೋಪ ಎಂದು ಪ್ರಶ್ನಿಸಿದ್ದಾರೆ.

ಅಷ್ಟೇ ಅಲ್ಲದೇ ಸಚಿವರ ವಿರುದ್ಧ ವಾಗ್ದಾಳಿ ನಡೆಸಿರುವ ಓವೈಸಿ ನಿಮಗೆ ಇಸ್ಲಾಮೋಫೋಬಿಯಾದ ಸಮಸ್ಯೆ ಇದೆ ಎಂದು ಟೀಕಿಸಿದ್ದಾರೆ.

ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಮುಸ್ಲಿಮರು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ ಮತ್ತು ಬ್ರಿಟಿಷರ ವಿರುದ್ಧ ಹೋರಾಡಲು ಮದರಸಾಗಳು 'ಫತ್ವಾ' (ನೋಟಿಸ್) ನೀಡಿದ್ದವು ಎಂದು ಓವೈಸಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT