ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ದಾಂತೇವಾಡದಲ್ಲಿ 3 ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಶರಣಾಗತಿ

ಇವರಲ್ಲಿ ಹಂಗಾ ತಮೋ ಅಲಿಯಾಸ್ ತಮೋ ಸೂರ್ಯ (37) ಮತ್ತು ಆತನ ಪತ್ನಿ ಆಯ್ತಿ ತಾತಿ (35) ತಲೆಯ ಮೇಲೆ ತಲಾ 8 ಲಕ್ಷ ರೂಪಾಯಿ ಬಹುಮಾನ ಘೋಷಸಲಾಗಿತ್ತು.

ದಾಂತೇವಾಡ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಮೂವರು ಮಹಿಳಾ ನಕ್ಸಲೀಯರು ಹಾಗೂ ಓರ್ವ ಪುರುಷ ನಕ್ಸಲ್ ಸೇರಿದಂತೆ ಒಟ್ಟು ನಾಲ್ವರು ನಕ್ಸಲೀಯರು ಶರಣಾಗಿದ್ದಾರೆ. ಇವರ ತಲೆ ಒಟ್ಟು 20 ಲಕ್ಷ ರೂ.ಗಳ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದರು.

ಇದರೊಂದಿಗೆ ಜೂನ್ 2020 ರಲ್ಲಿ ಪ್ರಾರಂಭಿಸಲಾದ 'ಲೋನ್ ವರ್ರಟು' (ಸ್ಥಳೀಯ ಗೊಂಡಿ ಭಾಷೆಯಲ್ಲಿ ನಿಮ್ಮ ಮನೆಗೆ, ಗ್ರಾಮಕ್ಕೆ ಹಿಂತಿರುಗಿ) ಅಭಿಯಾನದ ಅಡಿಯಲ್ಲಿ ತಲೆಗೆ ಬಹುಮಾನ ಘೋಷಿಸಲಾದ 187 ಸೇರಿದಂತೆ ಒಟ್ಟು 872 ನಕ್ಸಲೀಯರು ಜಿಲ್ಲೆಯಲ್ಲಿ ಹಿಂಸಾಚಾರವನ್ನು ತೊರೆದಿದ್ದಾರೆ ಎಂದು ಅವರು ಹೇಳಿದರು.

ಇತ್ತೀಚಿನ ದಂಪತಿ ಸೇರಿದಂತೆ ನಾಲ್ವರು ನಕ್ಸಲೀಯರು ದಾಂತೇವಾಡದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಮುಂದೆ ಹಾಜರಾಗಿದ್ದು, ಪೊಳ್ಳು ಮತ್ತು "ಅಮಾನವೀಯ" ಮಾವೋವಾದಿ ಸಿದ್ಧಾಂತ ಮತ್ತು ಕಾನೂನುಬಾಹಿರ ಸಂಘಟನೆಯೊಳಗಿನ ಆಂತರಿಕ ಕಲಹ ತಮ್ಮಲ್ಲಿ ನಿರಾಸೆ ಉಂಟು ಮಾಡಿರುವುದಾಗಿ ಹೇಳಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ಹೇಳಿದ್ದಾರೆ.

ಇವರಲ್ಲಿ ಹಂಗಾ ತಮೋ ಅಲಿಯಾಸ್ ತಮೋ ಸೂರ್ಯ (37) ಮತ್ತು ಆತನ ಪತ್ನಿ ಆಯ್ತಿ ತಾತಿ (35) ತಲೆಯ ಮೇಲೆ ತಲಾ 8 ಲಕ್ಷ ರೂಪಾಯಿ ಬಹುಮಾನ ಘೋಷಸಲಾಗಿತ್ತು. 2018 ರಲ್ಲಿ ಛತ್ತೀಸ್‌ಗಢ-ತೆಲಂಗಾಣ ಅಂತರರಾಜ್ಯ ಗಡಿಯಲ್ಲಿರುವ ಪಾಮ್ಡೆ (ಬಿಜಾಪುರ) ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ನಡೆದ ದಾಳಿಯಲ್ಲಿ ಅವರು ಭಾಗಿಯಾಗಿದ್ದಾರೆ .

ಇತರ ಮೂವರು ಮಹಿಳಾ ನಕ್ಸಲೀಯರು ಕ್ರಮವಾಗಿ 3 ಲಕ್ಷ ಮತ್ತು 1 ಲಕ್ಷ ರೂಪಾಯಿ ಬಹುಮಾನವನ್ನು ಹೊಂದಿದ್ದರು.ಶರಣಾದ ನಾಲ್ವರಿಗೆ ತಲಾ 25,000 ರೂಪಾಯಿ ನೆರವು ನೀಡಲಾಗಿದ್ದು, ಸರ್ಕಾರದ ನೀತಿಯನ್ನು ಮತ್ತಷ್ಟು ಪುನರ್ವಸತಿ ಕಲ್ಪಿಸಲಾಗುವುದು ಎಂದು ರೈ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT