ತಿರುಪತಿ ವೆಂಕಟೇಶ್ವರ ದೇವಾಲಯ 
ದೇಶ

ಲಡ್ಡು ವಿವಾದ: ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಶುದ್ದೀಕರಣ, ಶಾಂತಿ ಹೋಮ! Video

ನಾಲ್ಕು ಗಂಟೆಗಳ ಕಾಲ ಶಾಂತಿಯ ಹೋಮ ಪಂಚಗವ್ಯ ಪ್ರೊಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

ತಿರುಪತಿ: ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಾಲಯದ ಲಡ್ಡುವಿನಲ್ಲಿ ಪ್ರಾಣಿ ಜನ್ಯ ಕೊಬ್ಬಿನಾಂಶ ಬಳಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ದೇವಾಲಯದಲ್ಲಿ ಶಾಂತಿ ಹೋಮ, ಶುದ್ಧೀಕರಣ ಧಾರ್ಮಿಕ ಚಟುವಟಿಕೆಗಳು ಆರಂಭವಾಗಿವೆ.

ನಾಲ್ಕು ಗಂಟೆಗಳ ಕಾಲ ಶಾಂತಿಯ ಹೋಮ ಪಂಚಗವ್ಯ ಪ್ರೊಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

ತಿರುಪತಿ ತಿರುಮಲ ದೇವಸ್ಥಾನ ಸಮಿತಿ ಆಶ್ರಯದಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೂ ಶಾಂತಿ ಹೋಮ ಪಂಚಗವ್ಯ ಪ್ರೋಕ್ಷಣೆ ನಡೆಸಲಾಗಿದೆ. ಮಧ್ಯಾಹ್ನದವರೆಗೂ ಇನ್ನೂ ಹಲವು ಧಾರ್ಮಿಕ ಶುದ್ದೀಕರಣ ಕಾರ್ಯಗಳು ನಡೆಯಲಿದ್ದು, ಹಲವು ಪ್ರಮುಖರು ಭಾಗಿಯಾಗಿರುವುದಾಗಿ TTD ಮೂಲಗಳು ಖಚಿತಪಡಿಸಿವೆ.

ಈ ಆಚರಣೆಗಳು ಕೆಟ್ಟದನ್ನು ನಿವಾರಿಸುತ್ತದೆ ಮತ್ತು ಭಕ್ತರ ಯೋಗಕ್ಷೇಮದ ಜೊತೆಗೆ ಲಡ್ಡುವಿನ ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸುತ್ತದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಜೆ ಶ್ಯಾಮಲಾ ರಾವ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT