ನಿರ್ಮಲಾ ಸೀತಾರಾಮನ್-E&Y ಉದ್ಯೋಗಿ online desk
ದೇಶ

ಒತ್ತಡ ನಿಭಾಯಿಸುವ ಶಕ್ತಿ ದೈವತ್ವದಿಂದ ಮಾತ್ರ ಪಡೆಯಲು ಸಾಧ್ಯ: E&Y ಉದ್ಯೋಗಿ ಸಾವಿನ ಬಗ್ಗೆ ನಿರ್ಮಲಾ ಸೀತಾರಾಮನ್ ಹೇಳಿಕೆ!

ಒತ್ತಡಗಳನ್ನು ರ್ನಿವಹಿಸುವ ಆಂತರಿಕ ಶಕ್ತಿಯನ್ನು ಜನರು ಗಳಿಸಿಕೊಳ್ಳಲು ಸಾಧ್ಯವಿರುವುದು ದೈವತ್ವದ ಮೂಲಕ ಮಾತ್ರ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಚೆನ್ನೈ: ದೇಶಾದ್ಯಂತ ಸುದ್ದಿ ಮಾಡುತ್ತಿರುವ 26 ವರ್ಷದ ಚಾರ್ಟೆಡ್ ಅಕೌಂಟೆಂಟ್ ಸಾವು ಪ್ರಕರಣದ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ.

Ernst & Young ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವತಿ ಕೆಲಸದ ಒತ್ತಡದಿಂದ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಚೆನ್ನೈ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ನಿರ್ಮಲಾ ಸೀತಾರಾಮನ್, ಈ ಸಾವಿನ ಬಗ್ಗೆ ಯಾವುದೇ ಹೆಸರನ್ನು ಉಲ್ಲೇಖಿಸದೇ ಮಾತನಾಡಿದ್ದು, ಒತ್ತಡಗಳನ್ನು ನಿರ್ವಹಿಸುವ ಆಂತರಿಕ ಶಕ್ತಿಯನ್ನು ಜನರು ಗಳಿಸಿಕೊಳ್ಳಲು ಸಾಧ್ಯವಿರುವುದು ದೈವತ್ವದ ಮೂಲಕ ಮಾತ್ರ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರ ಈ ಹೇಳಿಕೆಯನ್ನು ನೆಟ್ಟಿಗರು ಹಾಗೂ ವಿಪಕ್ಷಗಳ ಹಲವು ನಾಯಕರು, ಸಂವೇದನಾರಹಿತ ಹೇಳಿಕೆ ಎಂದು ಆರೋಪಿಸಿದ್ದಾರೆ. "ನಮ್ಮ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಕಾಲೇಜು, ವಿಶ್ವವಿದ್ಯಾನಿಲಯಗಳಿಗೆ ಹೋಗುತ್ತಾರೆ ಮತ್ತು ಅಗಾಧ ಗೆಲುವು, ಅಥವಾ ಯಶಸ್ಸಿನೊಂದಿಗೆ ಹೊರಬರುತ್ತಾರೆ, ಕಂಪನಿ, ಇದು ಪಾಲುದಾರಿಕೆಯಾಗಿದೆ, ಅಲ್ಲಿ ಕೆಲಸ ಮಾಡುತ್ತಿದ್ದ ಸಿಎಯನ್ನು ಚೆನ್ನಾಗಿ ಓದಿದ್ದ ಯುವತಿ (ಕೆಲಸದ ಒತ್ತಡವನ್ನು ತಾಳಲಾರದೆ) ಎರಡು-ಮೂರು ದಿನಗಳ ಹಿಂದೆ ಸಾವನ್ನಪ್ಪಿದ್ದ ಸುದ್ದಿಯನ್ನು ನಾವು ಸ್ವೀಕರಿಸಿದ್ದೇವೆ - ಒತ್ತಡವನ್ನು ನಿಭಾಯಿಸಲು ಸಾಧ್ಯವಾಗದೆ ಆಕೆ ಮೃತಪಟ್ಟಿದ್ದಾಳೆ” ಎಂದು ತಮ್ಮ ಭಾಷಣದಲ್ಲಿ ಸೀತಾರಾಮನ್ ಹೇಳಿರುವುದು ದಾಖಲಾಗಿದೆ.

"ನೀವು ಯಾವುದೇ ವಿಷಯವನ್ನು ಅಧ್ಯಯನ ಮಾಡಿ ಮತ್ತು ನೀವು ಮಾಡುವ ಕೆಲಸ ಯಾವುದೇ ಇರಲಿ. ಅಲ್ಲಿನ ಒತ್ತಡವನ್ನು ನಿಭಾಯಿಸಲು ನೀವು ಆಂತರಿಕ ಶಕ್ತಿಯನ್ನು ಹೊಂದಿರಬೇಕು ಮತ್ತು ಇದನ್ನು ದೈವತ್ವದ ಮೂಲಕ ಮಾತ್ರ ಸಾಧಿಸಬಹುದು ಎಂಬುದನ್ನು ಕುಟುಂಬಗಳು ಕಲಿಸಬೇಕು ಎಂದು ಸೀತಾರಾಮನ್ ಹೇಳಿದ್ದಾರೆ. "ದೇವರಲ್ಲಿ ನಂಬಿಕೆ ಇಡಿ, ನಮಗೆ ದೇವರ ಅನುಗ್ರಹ ಬೇಕು. ದೇವರನ್ನು ಹುಡುಕಿ, ಉತ್ತಮ ಶಿಸ್ತನ್ನು ಕಲಿಯಿರಿ. ಇದರಿಂದ ಮಾತ್ರ ನಿಮ್ಮ ಆತ್ಮಶಕ್ತಿ ಬೆಳೆಯುತ್ತದೆ. ಆತ್ಮಶಕ್ತಿ ಬೆಳೆಯುವುದರೊಂದಿಗೆ ಮಾತ್ರ ಆಂತರಿಕ ಶಕ್ತಿ ಬರುತ್ತದೆ" ಎಂದು ಹಣಕಾಸು ಸಚಿವರು ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳು ದೈವತ್ವ ಮತ್ತು ಆಧ್ಯಾತ್ಮಿಕತೆಯನ್ನು ಕಲಿಕೆಯಲ್ಲಿ ತರಬೇಕು. ಆಗ ಮಾತ್ರ ನಮ್ಮ ಮಕ್ಕಳಿಗೆ ಆಂತರಿಕ ಶಕ್ತಿ ಬರುತ್ತದೆ, ಅದು ಅವರ ಮತ್ತು ದೇಶದ ಪ್ರಗತಿಗೆ ಸಹಾಯ ಮಾಡುತ್ತದೆ. ಅದು ನನ್ನ ಬಲವಾದ ನಂಬಿಕೆ, ”ಎಂದು ಸಚಿವರು ಹೇಳಿದ್ದಾರೆ.

ಈ ಹೇಳಿಕೆಗಳು ಗದ್ದಲಕ್ಕೆ ಕಾರಣವಾಗಿದ್ದು, ವಿಷಕಾರಿ ಕೆಲಸದ ಸ್ಥಳಗಳ ಸಮಸ್ಯೆಯನ್ನು ಪರಿಹರಿಸದೆ ಹಣಕಾಸು ಸಚಿವರು ಅಸೂಕ್ಷ್ಮ ಟೀಕೆಗಳನ್ನು ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT