ರಾಹುಲ್ ಗಾಂಧಿ 
ದೇಶ

'ಬಹುಜನರು' ತಮ್ಮ ಹಕ್ಕುಗಳನ್ನು ಪಡೆಯುವುದು ಮೋದಿಗೆ ಇಷ್ಟವಿಲ್ಲ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು 'ಜಾತಿ ಗಣತಿ' ಎಂಬ ಪದವನ್ನು ಹೇಳಲೂ ಹೆದರುತ್ತಾರೆ ಮತ್ತು 'ಬಹುಜನರು' ತಮ್ಮ ಹಕ್ಕುಗಳನ್ನು ಪಡೆಯುವುದು ಅವರಿಗೆ ಇಷ್ಟವಿಲ್ಲ ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನವದೆಹಲಿ: ಬಿಜೆಪಿ "ಬಹುಜನ ವಿರೋಧಿ" ಎಂದು ಆರೋಪಿಸಿದ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಕೇಸರಿ ಪಕ್ಷ ಎಷ್ಟೇ ಸುಳ್ಳುಗಳನ್ನು ಹರಡಿದರೂ "ಮೀಸಲಾತಿಗೆ ಧಕ್ಕೆಯಾಗಲು ನಾವು ಬಿಡುವುದಿಲ್ಲ" ಎಂದು ಸೋಮವಾರ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 'ಜಾತಿ ಗಣತಿ' ಎಂಬ ಪದವನ್ನು ಹೇಳಲೂ ಹೆದರುತ್ತಾರೆ ಮತ್ತು 'ಬಹುಜನರು' ತಮ್ಮ ಹಕ್ಕುಗಳನ್ನು ಪಡೆಯುವುದು ಅವರಿಗೆ ಇಷ್ಟವಿಲ್ಲ ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

"ಬಹುಜನ ವಿರೋಧಿ ಬಿಜೆಪಿ ಎಷ್ಟೇ ಸುಳ್ಳುಗಳನ್ನು ಹರಡಲಿ - ಮೀಸಲಾತಿಗೆ ಧಕ್ಕೆಯಾಗಲು ನಾವು ಬಿಡುವುದಿಲ್ಲ" ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ಹೇಳಿದ್ದಾರೆ.

‘ಸಮಗ್ರ ಜಾತಿ ಗಣತಿ ನಡೆದು ಪ್ರತಿ ವರ್ಗದ ಹಕ್ಕು, ಪಾಲು, ನ್ಯಾಯ ಸಿಗುವವರೆಗೆ ಮೀಸಲಾತಿ ಮೇಲಿನ ಶೇ.50ರ ಮಿತಿಯನ್ನು ತೆಗೆದು ಹಾಕುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ’ ಎಂದಿದ್ದಾರೆ.

"ಮೋದಿ ಜಿಯವರು 'ಜಾತಿ ಗಣತಿ' ಎಂದು ಹೇಳಲೂ ಹೆದರುತ್ತಾರೆ, ಬಹುಜನರು ತಮ್ಮ ಹಕ್ಕುಗಳನ್ನು ಪಡೆಯುವುದನ್ನು ಅವರು ಬಯಸುವುದಿಲ್ಲ!

"ನಾನು ಮತ್ತೊಮ್ಮೆ ಹೇಳುತ್ತೇನೆ - ನನಗೆ ಇದು ರಾಜಕೀಯ ವಿಷಯವಲ್ಲ, ಬಹುಜನರಿಗೆ ನ್ಯಾಯ ದೊರಕಿಸಿಕೊಡುವುದು ನನ್ನ ಜೀವನದ ಧ್ಯೇಯವಾಗಿದೆ" ಎಂದು ಪ್ರತಿಪಕ್ಷ ನಾಯಕ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT