ರಾಹುಲ್ ಗಾಂಧಿ 
ದೇಶ

'ಬಹುಜನರು' ತಮ್ಮ ಹಕ್ಕುಗಳನ್ನು ಪಡೆಯುವುದು ಮೋದಿಗೆ ಇಷ್ಟವಿಲ್ಲ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು 'ಜಾತಿ ಗಣತಿ' ಎಂಬ ಪದವನ್ನು ಹೇಳಲೂ ಹೆದರುತ್ತಾರೆ ಮತ್ತು 'ಬಹುಜನರು' ತಮ್ಮ ಹಕ್ಕುಗಳನ್ನು ಪಡೆಯುವುದು ಅವರಿಗೆ ಇಷ್ಟವಿಲ್ಲ ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನವದೆಹಲಿ: ಬಿಜೆಪಿ "ಬಹುಜನ ವಿರೋಧಿ" ಎಂದು ಆರೋಪಿಸಿದ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಕೇಸರಿ ಪಕ್ಷ ಎಷ್ಟೇ ಸುಳ್ಳುಗಳನ್ನು ಹರಡಿದರೂ "ಮೀಸಲಾತಿಗೆ ಧಕ್ಕೆಯಾಗಲು ನಾವು ಬಿಡುವುದಿಲ್ಲ" ಎಂದು ಸೋಮವಾರ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 'ಜಾತಿ ಗಣತಿ' ಎಂಬ ಪದವನ್ನು ಹೇಳಲೂ ಹೆದರುತ್ತಾರೆ ಮತ್ತು 'ಬಹುಜನರು' ತಮ್ಮ ಹಕ್ಕುಗಳನ್ನು ಪಡೆಯುವುದು ಅವರಿಗೆ ಇಷ್ಟವಿಲ್ಲ ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

"ಬಹುಜನ ವಿರೋಧಿ ಬಿಜೆಪಿ ಎಷ್ಟೇ ಸುಳ್ಳುಗಳನ್ನು ಹರಡಲಿ - ಮೀಸಲಾತಿಗೆ ಧಕ್ಕೆಯಾಗಲು ನಾವು ಬಿಡುವುದಿಲ್ಲ" ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ಹೇಳಿದ್ದಾರೆ.

‘ಸಮಗ್ರ ಜಾತಿ ಗಣತಿ ನಡೆದು ಪ್ರತಿ ವರ್ಗದ ಹಕ್ಕು, ಪಾಲು, ನ್ಯಾಯ ಸಿಗುವವರೆಗೆ ಮೀಸಲಾತಿ ಮೇಲಿನ ಶೇ.50ರ ಮಿತಿಯನ್ನು ತೆಗೆದು ಹಾಕುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ’ ಎಂದಿದ್ದಾರೆ.

"ಮೋದಿ ಜಿಯವರು 'ಜಾತಿ ಗಣತಿ' ಎಂದು ಹೇಳಲೂ ಹೆದರುತ್ತಾರೆ, ಬಹುಜನರು ತಮ್ಮ ಹಕ್ಕುಗಳನ್ನು ಪಡೆಯುವುದನ್ನು ಅವರು ಬಯಸುವುದಿಲ್ಲ!

"ನಾನು ಮತ್ತೊಮ್ಮೆ ಹೇಳುತ್ತೇನೆ - ನನಗೆ ಇದು ರಾಜಕೀಯ ವಿಷಯವಲ್ಲ, ಬಹುಜನರಿಗೆ ನ್ಯಾಯ ದೊರಕಿಸಿಕೊಡುವುದು ನನ್ನ ಜೀವನದ ಧ್ಯೇಯವಾಗಿದೆ" ಎಂದು ಪ್ರತಿಪಕ್ಷ ನಾಯಕ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT