ಸುಪ್ರೀಂ ಕೋರ್ಟ್  
ದೇಶ

ಮಕ್ಕಳ ಪೋರ್ನ್ ಚಿತ್ರ ಡೌನ್ ಲೋಡ್ ಮಾಡುವುದು, ವೀಕ್ಷಿಸುವುದು ಪೋಕ್ಸೋ ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧ: ಸುಪ್ರೀಂ ಕೋರ್ಟ್

ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ನೇತೃತ್ವದ ನ್ಯಾಯಪೀಠವು ತಳ್ಳಿಹಾಕಿದೆ.

ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ನೋಡುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧವಾಗಿದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯುವ ಕಠಿಣ ಕಾನೂನು ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ನೇತೃತ್ವದ ನ್ಯಾಯಪೀಠವು ತಳ್ಳಿಹಾಕಿದೆ. ತೀರ್ಪು ನೀಡುವಲ್ಲಿ ಮದ್ರಸ್ ಉಚ್ಚ ನ್ಯಾಯಾಲಯವು "ಘೋರ ದೋಷ" ಎಸಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

28 ವರ್ಷದ ಯುವಕನೊಬ್ಬ ತನ್ನ ಫೋನ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಮದ್ರಾಸ್ ಹೈಕೋರ್ಟ್‌ ಆದೇಶ ನೀಡಿತ್ತು. ನ್ಯಾಯಾಲಯವು ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿತ್ತು.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಅಶ್ಲೀಲತೆ ಚಿತ್ರಗಳನ್ನು ಮೊಬೈಲ್, ಕಂಪ್ಯೂಟರ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ನೋಡುವ ಗಂಭೀರ ಸಮಸ್ಯೆ ಹೊಂದಿದ್ದಾರೆ. ಸಮಾಜವು ಅವರನ್ನು ಶಿಕ್ಷಿಸುವ ಬದಲು ಅವರಿಗೆ ಶಿಕ್ಷಣ ನೀಡುವಷ್ಟು ಪ್ರಬುದ್ಧವಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಇಂದು ಮರುಸ್ಥಾಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

SCROLL FOR NEXT