ಸಾಂದರ್ಭಿಕ ಚಿತ್ರ 
ದೇಶ

ತ್ರಿಪುರಾ: ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗತಿಗೆ 400 ಉಗ್ರರು ಸಜ್ಜು!

ಈ ಉಗ್ರಗಾಮಿಗಳು ನಿಷೇಧಿತ ಉಗ್ರಗಾಮಿ ಸಂಘಟನೆಗಳಾದ ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ (ಎನ್‌ಎಲ್‌ಎಫ್‌ಟಿ) ಮತ್ತು ಆಲ್ ತ್ರಿಪುರಾ ಟೈಗರ್ ಫೋರ್ಸ್ (ಎಟಿಟಿಎಫ್) ಗೆ ಸೇರಿದವರಾಗಿದ್ದಾರೆ.

ಅಗರ್ತಲಾ: ತ್ರಿಪುರಾದಲ್ಲಿನ ಸುಮಾರು 400 ಉಗ್ರರು ಸೆಪಹಿಜಾಲಾ ಜಿಲ್ಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಉಗ್ರಗಾಮಿಗಳು ನಿಷೇಧಿತ ಉಗ್ರಗಾಮಿ ಸಂಘಟನೆಗಳಾದ ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ (ಎನ್‌ಎಲ್‌ಎಫ್‌ಟಿ) ಮತ್ತು ಆಲ್ ತ್ರಿಪುರಾ ಟೈಗರ್ ಫೋರ್ಸ್ (ಎಟಿಟಿಎಫ್) ಗೆ ಸೇರಿದವರಾಗಿದ್ದಾರೆ.

ಸೆಪ್ಟೆಂಬರ್ 4 ರಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಉಗ್ರರು ಶರಣಾಗುತ್ತಿದ್ದಾರೆ.

ಎನ್‌ಎಲ್‌ಎಫ್‌ಟಿ ಮತ್ತು ಎಟಿಟಿಎಫ್‌ನ ಸುಮಾರು 400 ಉಗ್ರಗಾಮಿಗಳು ಜಂಪೂಯಿಜಾಲಾದಲ್ಲಿರುವ ತ್ರಿಪುರಾ ಸ್ಟೇಟ್ ರೈಫಲ್ಸ್ (ಟಿಎಸ್‌ಆರ್) ನ 7 ನೇ ಬೆಟಾಲಿಯನ್‌ನ ಪ್ರಧಾನ ಕಛೇರಿಯಲ್ಲಿ ಸಿಎಂ ಮುಂದೆ ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ಗೃಹ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಎರಡು ನಿಷೇಧಿತ ಸಂಘಟನೆಯ ಎಲ್ಲಾ ನಾಯಕರು ಶಾಶ್ವತ ಶಾಂತಿಗೆ ದಾರಿ ಮಾಡಿಕೊಡಲು ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಘಟನೆಗಳು 1990 ರ ದಶಕದ ಉತ್ತರಾರ್ಧದಿಂದ ಸುಮಾರು ಎರಡು ದಶಕಗಳ ಕಾಲ ರಾಜ್ಯದಲ್ಲಿ ಅಪಾರ ವಿನಾಶವನ್ನುಂಟುಮಾಡಿದವು. ದಂಗೆಯಿಂದಾಗಿ ಸಾವಿರಾರು ಜನರು ವಿಶೇಷವಾಗಿ ಆದಿವಾಸಿಗಳಲ್ಲದವರು ಸ್ಥಳಾಂತರಗೊಂಡರು. ಎರಡು ಸಂಘಟನೆಗಳ ಉಗ್ರಗಾಮಿಗಳ ಪುನರ್ವಸತಿಗಾಗಿ ಕೇಂದ್ರವು 250 ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ಘೋಷಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!