AAP ಶಾಸಕ ಅಮಾನತುಲ್ಲಾ ಖಾನ್ 
ದೇಶ

AAP ಶಾಸಕ ಅಮಾನತುಲ್ಲಾ ನ್ಯಾಯಾಂಗ ಬಂಧನ ವಿಸ್ತರಣೆ!

ಸೋಮವಾರ ಅವರ ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಖಾನ್ ಅವರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ತೀರ್ಪು ಪ್ರಕಟಿಸಿದರು.

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಅಕ್ಟೋಬರ್ 7 ರವರೆಗೆ ವಿಸ್ತರಿಸಿದೆ.

ಸೋಮವಾರ ಅವರ ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಖಾನ್ ಅವರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ತೀರ್ಪು ಪ್ರಕಟಿಸಿದರು.

ದೆಹಲಿಯ ಓಖ್ಲಾದಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಜಾರಿ ನಿರ್ದೇಶನಾಲಯ (ಇಡಿ) ಸೆಪ್ಟೆಂಬರ್ 2 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಅವರನ್ನು ಬಂಧಿಸಿತ್ತು. ಈ ಹಂತದಲ್ಲಿ ಖಾನ್ ಅವರನ್ನು ಬಿಡುಗಡೆ ಮಾಡುವುದರಿಂದ ಸಾಕ್ಷಿಗಳನ್ನು ತಿರುಚಲು ಕಾರಣವಾಗಬಹುದು ಮತ್ತು ತನಿಖೆಗೆ ಅಡ್ಡಿಯಾಗಬಹುದು ಎಂದು ಇಡಿ ವಾದಿಸಿತು.

ಹುಡುಕಾಟದ ನಂತರ ವಿಚಾರಣೆಯ ಸಮಯದಲ್ಲಿ ಖಾನ್ "ತಪ್ಪಿಸಿಕೊಳ್ಳುತ್ತಿದ್ದರು. ಇದರಿಂದ ಅವರನ್ನು ಬಂಧಿಸಬೇಕಾಯಿತು. ಖಾನ್ ಅಧ್ಯಕ್ಷರಾಗಿರುವ ದೆಹಲಿ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಅಕ್ರಮ ಆಸ್ತಿಗಳ ಆರೋಪಗಳಿಗೆ ಸಂಬಂಧಿಸಿದ ಆರ್ಥಿಕ ದುರ್ಬಳಕೆ ಅಪರಾಧ ಕುರಿತು ಸಂಸ್ಥೆ ತನಿಖೆ ನಡೆಸುತ್ತಿದೆ ಎಂದು ಇಡಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT