ಸಾಂಕೇತಿಕ ಚಿತ್ರ online desk
ದೇಶ

ಉತ್ತರ ಪ್ರದೇಶ: ಗನ್ ತೋರಿಸಿ ಬೆದರಿಕೆ; ನರ್ಸಿಂಗ್ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ!

ಜಲಾಲಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ವಿದ್ಯಾರ್ಥಿಯು ಚೌಕ್ ಕೊತ್ವಾಲಿ ಪ್ರದೇಶದಲ್ಲಿರುವ ಕಾಲೇಜಿನಲ್ಲಿ ನರ್ಸಿಂಗ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಸಂಜಯ್ ಕುಮಾರ್ ತಿಳಿಸಿದ್ದಾರೆ.

ಶಹಜಹಾನ್ ಪುರ: ಕಟ್ಟಡ ನಿರ್ಮಾಣ ಕಾರ್ಮಿಕ ಹಾಗೂ ಆತನ ಸಹಚರ ಗನ್ ತೋರಿಸಿ ಬೆದರಿಕೆ ಹಾಕಿ ನರ್ಸಿಂಗ್ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ.

ಓರ್ವ ಆರೋಪಿ ಬಂಧನಕ್ಕೆ ಒಳಗಾಗಿದ್ದರೆ, ಮತ್ತೋರ್ವನ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಜಲಾಲಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ವಿದ್ಯಾರ್ಥಿಯು ಚೌಕ್ ಕೊತ್ವಾಲಿ ಪ್ರದೇಶದಲ್ಲಿರುವ ಕಾಲೇಜಿನಲ್ಲಿ ನರ್ಸಿಂಗ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಸಂಜಯ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಟೈಲ್ ಗುತ್ತಿಗೆದಾರ ಸುರೇಶ್ ಕುಮಾರ್ (35) ಮತ್ತು ಅವರ ಪಾಲುದಾರ ಅನ್ಮೋಲ್ ಕಾಲೇಜಿನ ವಾಶ್ ರೂಂನಲ್ಲಿ ವಿದ್ಯಾರ್ಥಿನಿಯನ್ನು ಹಿಡಿದು ಕಿರುಕುಳ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿನಿ ಕೂಗಾಡಲು ಮುಂದಾದಾಗ ಸುರೇಶ್ ಆಕೆಯ ಬಾಯಿ ಬಿಗಿದು ಬಂದೂಕನ್ನು ತೋರಿಸಿದ,'' ಎಂದು ಹೇಳಿದ ಸಂಜಯ್ ಕುಮಾರ್, ''ಆದರೂ ಧೈರ್ಯ ತೋರಿದ ವಿದ್ಯಾರ್ಥಿನಿ ಆರೋಪಿಯ ಕೈ ಕಚ್ಚಿ ಕಿರುಚಾಡುತ್ತಾ ಬಾತ್ ರೂಂನಿಂದ ಹೊರಗೆ ಓಡಿಹೋದಳು ಎಂದು ತಿಳಿಸಿದ್ದಾರೆ.

ಬಾಲಕಿಯ ಕಿರುಚಾಟ ಕೇಳಿ ನರ್ಸಿಂಗ್ ಕಾಲೇಜು ಸಿಬ್ಬಂದಿ ಹಾಗೂ ಇತರೆ ವಿದ್ಯಾರ್ಥಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅವರನ್ನು ನೋಡಿದ ಇಬ್ಬರೂ ಓಡಿಹೋಗಲು ಪ್ರಾರಂಭಿಸಿದರು, ಆದರೆ ಸುರೇಶ್ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕೊಲೆ ಯತ್ನ ಮತ್ತು ಕಿರುಕುಳಕ್ಕೆ ಸಂಬಂಧಿಸಿದ ಸಂಬಂಧಿತ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್‌ಗಳ ಅಡಿಯಲ್ಲಿ ಇಬ್ಬರೂ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಅನ್ಮೋಲ್ ಗಾಗಿ ಶೋಧ ನಡೆಸುತ್ತಿದ್ದೇವೆ ಎಂದು ಎಎಸ್ಪಿ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT