ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಮಾನವೀಯತೆಯ ಯಶಸ್ಸು ಯುದ್ಧಭೂಮಿಯಲ್ಲಿಲ್ಲ: ಪ್ರಧಾನಿ ಮೋದಿ

ಯುದ್ಧ ಮತ್ತು ಸಂಘರ್ಷಗಳು ಇಂದಿನ ಅಗತ್ಯವಲ್ಲ. ಭವಿಷ್ಯಕ್ಕಾಗಿ ನಾವು ಅಭಿವೃದ್ಧಿ ಪಥದತ್ತ ನಡೆಯಬೇಕಿದೆ. ವಿಶ್ವ ಶಾಂತಿ ಮತ್ತು ಭದ್ರತೆಗಾಗಿ ನಾವೆಲ್ಲರೂ ಒಂದಾಗಬೇಕಿದೆ. ಹೊಸ ಸವಾಲುಗಳನ್ನು ಮೆಟ್ಟಿ ನಿಲ್ಲಬೇಕಿದೆ.

ನವದೆಹಲಿ: ಮಾನವೀಯತೆಯ ಯಶಸ್ಸು ಸಾಮೂಹಿಕ ಶಕ್ತಿಯಲ್ಲಿದೆ. ಯುದ್ಧಭೂಮಿಯಲ್ಲಿ ಅಲ್ಲ. ವಿಶ್ವ ಶಾಂತಿ ಮತ್ತು ಅಭಿವೃದ್ಧಿಗಾಗಿ ಜಾಗತಿಕ ಶಕ್ತಿಗಳು ಸುಧಾರಣೆಯತ್ತ ಹೊರಳುವುದು ಅತ್ಯಗತ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಶ್ವದ ಜನಸಂಖ್ಯೆಯ ಆರನೇ ಒಂದು ಭಾಗದಷ್ಟು ಇರುವ 1.4 ಬಿಲಿಯನ್ ಭಾರತೀಯರ ಪರವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಬಂದಿದ್ದೇನೆ ಎಂದು ಹೇಳಿದರು.

ವಿಶ್ವಶಾಂತಿ ಇಂದಿನ ಅಗತ್ಯ ಎಂಬುದನ್ನು ಪುನರುಚ್ಛರಿಸಿದ ಮೋದಿಯವರು, ಯುದ್ಧ ಮತ್ತು ಸಂಘರ್ಷಗಳು ಇಂದಿನ ಅಗತ್ಯವಲ್ಲ. ಭವಿಷ್ಯಕ್ಕಾಗಿ ನಾವು ಅಭಿವೃದ್ಧಿ ಪಥದತ್ತ ನಡೆಯಬೇಕಿದೆ. ವಿಶ್ವ ಶಾಂತಿ ಮತ್ತು ಭದ್ರತೆಗಾಗಿ ನಾವೆಲ್ಲರೂ ಒಂದಾಗಬೇಕಿದೆ. ಹೊಸ ಸವಾಲುಗಳನ್ನು ಮೆಟ್ಟಿ ನಿಲ್ಲಬೇಕಿದೆ ಎಂದು ಹೇಳಿದರು.

ವಿಶ್ವದ ಭವಿಷ್ಯದ ಕುರಿತು ಯಾವುದೇ ಚರ್ಚೆಯಲ್ಲಿ ಮಾನವ ಕೇಂದ್ರಿತ ವಿಧಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸುಸ್ಥಿರ ಅಭಿವೃದ್ಧಿಗೆ ಆದ್ಯತೆ ನೀಡುವಾಗ ಮಾನವ ಕಲ್ಯಾಣ, ಆಹಾರ ಮತ್ತು ಆರೋಗ್ಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಭಾರತದಲ್ಲಿ 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವ ಮೂಲಕ, ಸುಸ್ಥಿರ ಅಭಿವೃದ್ಧಿಯಿಂದ ಯಶಸ್ಸು ಸಾಧಿಸಬಹುದು ಎಂಬುದನ್ನು ನಮ್ಮ ಸರ್ಕಾರ ಮಾಡಿ ತೋರಿಸಿದೆ. ಇದನ್ನು ಹಂಚಿಕೊಳ್ಳಲು ನಾವು ಸಿದ್ಧರಿದ್ದೇವೆಂದು ಹೇಳಿದರು.

ಇದೇ ವೇಳೆ ಭಯೋತ್ಪಾದನೆಯು ಜಾಗತಿಕ ಶಾಂತಿಗೆ ಗಂಭೀರ ಬೆದರಿಕೆಯಾಗಿ ಉಳಿದಿದೆ. ಸೈಬರ್, ಸಮುದ್ರ ಮತ್ತು ಬಾಹ್ಯಾಕಾಶದಂತಹ ಕ್ಷೇತ್ರಗಳು ಸಂಘರ್ಷದ ಹೊಸ ರಂಗಭೂಮಿಗಳಾಗಿ ಹೊರಹೊಮ್ಮುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಜಾಗತಿಕ ಕಾರ್ಯಗಳು ಜಾಗತಿಕ ಮಹತ್ವಾಕಾಂಕ್ಷೆಗಳಿಗೆ ಹೊಂದಿಕೆಯಾಗಬೇಕು. ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ ಬಳಸಬೇಕು. ನಮಗೆ ಜಾಗತಿಕ ಡಿಜಿಟಲ್ ಸಮತೋಲನ ಬೇಕು. ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಸೇತುವೆಯಾಗಬೇಕೇ ಹೊರತು ಜಾಗತಿಕ ಒಳಿತಿಗಾಗಿ ತಡೆಗೋಡೆಯಾಗಬಾರದು. ಭಾರತವು ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಎಂಬ ತನ್ನ ನೀತಿಗೆ ಬದ್ಧವಾಗಿದೆ. ಮಾನವೀಯತೆಯ ಪ್ರಯೋಜನಕ್ಕಾಗಿ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT