ನಟ ಕಾರ್ತಿ ಹಾಗೂ ಪವನ್ ಕಲ್ಯಾಣ್ 
ದೇಶ

ತಿರುಪತಿ ಲಡ್ಡು ವಿವಾದ: Pawan Kalyan ವಾರ್ನಿಂಗ್ ಬೆನ್ನಲ್ಲೇ ತಮಿಳು ನಟ Karthi ಕ್ಷಮೆಯಾಚನೆ!

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ಇತ್ತೀಚೆಗೆ ತಮಿಳುನಟ ಕಾರ್ತಿ ಕೂಡ ಸಿನಿಮಾವೊಂದರ ಕಾರ್ಯಕ್ರಮದಲ್ಲಿ ಲಡ್ಡು ವಿಚಾರ ಬಂದಾಗ ಅದು ಸೆನ್ಸಿಟಿವ್ ವಿಚಾರ ಅದರ ಬಗ್ಗೆ ಮಾತನಾಡುವುದು ಬೇಡ ಎಂದು ಅಪಹಾಸ್ಯ ಮಾಡಿದ್ದರು.

ಚೆನ್ನೈ: ಸಿನಿಮಾ ಕಾರ್ಯಕ್ರಮವೊಂದರಲ್ಲಿ ತಿರುಪತಿ-ತಿರುಮಲ ಲಡ್ಡು ವಿವಾದದ ಕುರಿತು ಮಾತನಾಡಿದ್ದ ಖ್ಯಾತ ತಮಿಳು ನಟ ಕಾರ್ತಿ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ರನ್ನು ಉಲ್ಲೇಖಿಸಿ ಕ್ಷಮೆ ಯಾಚಿಸಿದ್ದಾರೆ.

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ. ಇತ್ತೀಚೆಗೆ ತಮಿಳುನಟ ಕಾರ್ತಿ ಕೂಡ ಸಿನಿಮಾವೊಂದರ ಕಾರ್ಯಕ್ರಮದಲ್ಲಿ ಲಡ್ಡು ವಿಚಾರ ಬಂದಾಗ ಅದು ಸೆನ್ಸಿಟಿವ್ ವಿಚಾರ ಅದರ ಬಗ್ಗೆ ಮಾತನಾಡುವುದು ಬೇಡ ಎಂದು ಅಪಹಾಸ್ಯ ಮಾಡಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ತಿರುಪತಿಯ ಪವಿತ್ರ ಲಡ್ಡು ವಿಚಾರದಲ್ಲಿ ಅಪಹಾಸ್ಯ ಮಾಡಬಾರದು. ನಾವು ನಿಮ್ಮನ್ನು ಕಲಾವಿದರಾಗಿ ಗೌರವಿಸುತ್ತೇವೆ. ಆದರೆ ಮುಖ್ಯವಾಗಿ ಸನಾತನ ಧರ್ಮದ ಬಗ್ಗೆ ಒಂದೇ ಒಂದು ಅಕ್ಷರ ಮಾತನಾಡುವ ಮುನ್ನ ನೂರು ಬಾರಿ ಯೋಚಿಸಿ ಎಂದು ಖಾರವಾಗಿ ಹೇಳಿದ್ದರು.

ಈ ವಿಚಾರ ವೈರಲ್ ಆಗುತ್ತಲ್ಲೇ ಎಚ್ಚೆತ್ತುಕೊಂಡಿರುವ ನಟ ಕಾರ್ತಿ ಕ್ಷಮೆ ಯಾಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾರ್ತಿ, 'ಆತ್ಮೀಯ ಪವನ್ ಕಲ್ಯಾಣ್ ಸರ್.. ನಿಮ್ಮ ಬಗ್ಗೆ ನಮಗೆ ತುಂಬಾ ಗೌರವವಿದೆ. ನನ್ನಿಂದ ಉಂಟಾದ ಯಾವುದೇ ಉದ್ದೇಶಪೂರ್ವಕ ತಪ್ಪುಗ್ರಹಿಕೆಗೆ ನಾನು ಕ್ಷಮೆಯಾಚಿಸುತ್ತೇನೆ. ವೆಂಕಟೇಶ್ವರ ಸ್ವಾಮಿಯ ವಿನಮ್ರ ಭಕ್ತನಾಗಿ, ನಾನು ಯಾವಾಗಲೂ ನಮ್ಮ ಸಂಪ್ರದಾಯಗಳನ್ನು ಆತ್ಮೀಯವಾಗಿ ಹಿಡಿದಿಟ್ಟುಕೊಳ್ಳುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT