ನಟ ಕಾರ್ತಿ ಹಾಗೂ ಪವನ್ ಕಲ್ಯಾಣ್ 
ದೇಶ

ತಿರುಪತಿ ಲಡ್ಡು ವಿವಾದ: Pawan Kalyan ವಾರ್ನಿಂಗ್ ಬೆನ್ನಲ್ಲೇ ತಮಿಳು ನಟ Karthi ಕ್ಷಮೆಯಾಚನೆ!

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ಇತ್ತೀಚೆಗೆ ತಮಿಳುನಟ ಕಾರ್ತಿ ಕೂಡ ಸಿನಿಮಾವೊಂದರ ಕಾರ್ಯಕ್ರಮದಲ್ಲಿ ಲಡ್ಡು ವಿಚಾರ ಬಂದಾಗ ಅದು ಸೆನ್ಸಿಟಿವ್ ವಿಚಾರ ಅದರ ಬಗ್ಗೆ ಮಾತನಾಡುವುದು ಬೇಡ ಎಂದು ಅಪಹಾಸ್ಯ ಮಾಡಿದ್ದರು.

ಚೆನ್ನೈ: ಸಿನಿಮಾ ಕಾರ್ಯಕ್ರಮವೊಂದರಲ್ಲಿ ತಿರುಪತಿ-ತಿರುಮಲ ಲಡ್ಡು ವಿವಾದದ ಕುರಿತು ಮಾತನಾಡಿದ್ದ ಖ್ಯಾತ ತಮಿಳು ನಟ ಕಾರ್ತಿ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ರನ್ನು ಉಲ್ಲೇಖಿಸಿ ಕ್ಷಮೆ ಯಾಚಿಸಿದ್ದಾರೆ.

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ. ಇತ್ತೀಚೆಗೆ ತಮಿಳುನಟ ಕಾರ್ತಿ ಕೂಡ ಸಿನಿಮಾವೊಂದರ ಕಾರ್ಯಕ್ರಮದಲ್ಲಿ ಲಡ್ಡು ವಿಚಾರ ಬಂದಾಗ ಅದು ಸೆನ್ಸಿಟಿವ್ ವಿಚಾರ ಅದರ ಬಗ್ಗೆ ಮಾತನಾಡುವುದು ಬೇಡ ಎಂದು ಅಪಹಾಸ್ಯ ಮಾಡಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ತಿರುಪತಿಯ ಪವಿತ್ರ ಲಡ್ಡು ವಿಚಾರದಲ್ಲಿ ಅಪಹಾಸ್ಯ ಮಾಡಬಾರದು. ನಾವು ನಿಮ್ಮನ್ನು ಕಲಾವಿದರಾಗಿ ಗೌರವಿಸುತ್ತೇವೆ. ಆದರೆ ಮುಖ್ಯವಾಗಿ ಸನಾತನ ಧರ್ಮದ ಬಗ್ಗೆ ಒಂದೇ ಒಂದು ಅಕ್ಷರ ಮಾತನಾಡುವ ಮುನ್ನ ನೂರು ಬಾರಿ ಯೋಚಿಸಿ ಎಂದು ಖಾರವಾಗಿ ಹೇಳಿದ್ದರು.

ಈ ವಿಚಾರ ವೈರಲ್ ಆಗುತ್ತಲ್ಲೇ ಎಚ್ಚೆತ್ತುಕೊಂಡಿರುವ ನಟ ಕಾರ್ತಿ ಕ್ಷಮೆ ಯಾಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾರ್ತಿ, 'ಆತ್ಮೀಯ ಪವನ್ ಕಲ್ಯಾಣ್ ಸರ್.. ನಿಮ್ಮ ಬಗ್ಗೆ ನಮಗೆ ತುಂಬಾ ಗೌರವವಿದೆ. ನನ್ನಿಂದ ಉಂಟಾದ ಯಾವುದೇ ಉದ್ದೇಶಪೂರ್ವಕ ತಪ್ಪುಗ್ರಹಿಕೆಗೆ ನಾನು ಕ್ಷಮೆಯಾಚಿಸುತ್ತೇನೆ. ವೆಂಕಟೇಶ್ವರ ಸ್ವಾಮಿಯ ವಿನಮ್ರ ಭಕ್ತನಾಗಿ, ನಾನು ಯಾವಾಗಲೂ ನಮ್ಮ ಸಂಪ್ರದಾಯಗಳನ್ನು ಆತ್ಮೀಯವಾಗಿ ಹಿಡಿದಿಟ್ಟುಕೊಳ್ಳುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT