ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಬಾಡಿಗೆಗೆ ಇದ್ದ ಯುವತಿ ಬೆಡ್ ರೂಮಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ್ದ ಮನೆ ಮಾಲೀಕನ ಬಂಧನ!

ಸಂತ್ರಸ್ತ ಯುವತಿ ಐಎಎಸ್ ಆಕಾಂಕ್ಷಿಯಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು.

ನವದೆಹಲಿ: ಪೂರ್ವ ದೆಹಲಿಯ ಶಕರ್‌ಪುರ ಪ್ರದೇಶದಲ್ಲಿ ತನ್ನ ಮಹಿಳಾ ಬಾಡಿಗೆದಾರರ ಮನೆಯ ಬೆಡ್ ರೂಮ್ ಮತ್ತು ವಾಶ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾಗಳನ್ನು ಅಳವಡಿಸಿದ್ದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸಂತ್ರಸ್ತ ಯುವತಿ ಐಎಎಸ್ ಆಕಾಂಕ್ಷಿಯಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಮತ್ತು ನಗರದಿಂದ ಹೊರಗೆ ಹೋಗುವ ಮುನ್ನ ಮನೆಯ ಕೀಯನ್ನು ತನ್ನ ಮನೆ ಮಾಲೀಕನ ಮಗ ಕರಣ್‌ಗೆ ನೀಡುತ್ತಿದ್ದರು ಎಂದು ಅವರು ಹೇಳಿದ್ದಾರೆ.

ಮಹಿಳೆ ತನ್ನ ವಾಟ್ಸಾಪ್‌ನಲ್ಲಿ ಕೆಲವು ವಿಚಿತ್ರ ಚಟುವಟಿಕೆಗೆಳು ನಡೆಯುತ್ತಿರುವುದನ್ನು ಗಮನಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಉಪ ಆಯುಕ್ತ(ಪೂರ್ವ) ಅಪೂರ್ವ ಗುಪ್ತಾ ಅವರು ಹೇಳಿದ್ದಾರೆ.

ಪೊಲೀಸರು "ಮಹಿಳೆಗೆ ತಾನು ಲಿಂಕ್ ಮಾಡಿದ ಡಿವೈಸ್ ಗಳನ್ನು ಪರೀಕ್ಷಿಸಲು ಸಲಹೆ ನೀಡಿದ್ದಾರೆ. ಪರಿಶೀಲಿಸಿದಾಗ ಅನಾಮಧೇಯ ಲ್ಯಾಪ್ ಟಾಪ್ ಒಂದು ಆಕೆಯ ವಾಟ್ಸಪ್ ಖಾತೆಯ ಜೊತೆಗೆ ಲಿಂಕ್ ಆಗಿತ್ತು. ತಕ್ಷಣವೇ ಮಹಿಳೆ ಲಾಗ್ ಔಟ್ ಆಗಿದ್ದಾರೆ ಮತ್ತು ತನ್ನ ಮನೆಯಲ್ಲಿ ಹಿಡನ್ ಕ್ಯಾಮೆರಾಗಳು ಅಥವಾ ಕಣ್ಗಾವಲು ಸಾಧನಗಳಿಗಾಗಿ ಶೋಧಿಸಿದ್ದಾರೆ. ಈ ವೇಳೆ ಅವರ ಬಾತ್ ರೂಮ್ ನ ಬಲ್ಬ್ ಹೋಲ್ಡರ್ನಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದೆ.

ಈ ಸಂಬಂಧ ಯುವತಿ ಸೋಮವಾರ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಪೊಲೀಸ್ ತಂಡ ಸಂಪೂರ್ಣ ಹುಡುಕಾಟ ನಡೆಸಿತು ಮತ್ತು ಆಕೆಯ ಮಲಗುವ ಕೋಣೆಯ ಬಲ್ಬ್ ಹೋಲ್ಡರ್‌ನಲ್ಲಿ ಅಳವಡಿಸಲಾದ ಮತ್ತೊಂದು ಕ್ಯಾಮೆರಾವನ್ನು ಪತ್ತೆ ಮಾಡಲಾಗಿದೆ ಎಂದು ಗುಪ್ತಾ ಹೇಳಿದ್ದಾರೆ.

ತಾನು ಊರಿಗೆ ಹೋದಾಗಲ್ಲೆಲ್ಲಾ ಅದೇ ಕಟ್ಟಡದ ಬೇರೆ ಮಹಡಿಯಲ್ಲಿ ವಾಸಿಸುವ ಮನೆ ಮಾಲೀಕನ ಪುತ್ರ ಕರಣ್‌ಗೆ ತನ್ನ ಮನೆಯ ಕೀ ಕೊಟ್ಟಿದ್ದೇನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ.

ಈ ಸಂಬಂಧ ಬಿಎನ್‌ಎಸ್‌ನ ಸೆಕ್ಷನ್ 77(ವೋಯರಿಸಂ) ಅಡಿಯಲ್ಲಿ ಶಕರ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರಣ್‌ನನ್ನು ಬಂಧಿಸಲಾಗಿದೆ.

ಕರಣ್ ಪದವೀಧರರಾಗಿದ್ದು, ಕಳೆದ ಏಳು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT