ಬೀದಿ ಬದಿ ವ್ಯಾಪಾರಿ (ಸಂಗ್ರಹ ಚಿತ್ರ) online desk
ದೇಶ

ಪ್ರತಿ ಅಂಗಡಿ ಮಾಲಿಕ, ಬೀದಿ ಬದಿ ವ್ಯಾಪಾರಿ ಗುರುತು ಪ್ರಕಟಿಸುವುದು ಕಡ್ಡಾಯ: ಹಿಮಾಚಲ ಪ್ರದೇಶ ಸರ್ಕಾರ

ಆಹಾರ ಔಟ್ ಲೆಟ್ ಗಳಿಗೆ ಸಂಬಂಧಿಸಿದ ಆದೇಶ ಇದಾಗಿದೆ. ಲೋಕೋಪಯೋಗಿ ನಗರ ಇಲಾಖೆ ಹಾಗೂ ಪುರಸಭಾ ನಿಗಮದೊಂದಿಗೆ ಸಭೆ ನಡೆಸಿದ ಬಳಿಕ ಔಟ್ ಲೆಟ್ ಗಳ ವ್ಯಾಪಾರಿಗಳು ತಮ್ಮ ಗುರುತನ್ನು ಬಹಿರಂಗಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ

ಶಿಮ್ಲಾ: ಪ್ರತಿಯೊಬ್ಬ ಅಂಗಡಿ ಮಾಲಿಕ ಹಾಗೂ ಬೀದಿ ಬದಿಯ ವ್ಯಾಪಾರಿ ತಮ್ಮ ಗುರುತನ್ನು ಪ್ರಕಟಿಸುವುದನ್ನು ಹಿಮಾಚಲ ಪ್ರದೇಶ ಸರ್ಕಾರ ಕಡ್ಡಾಯಗೊಳಿಸಿದೆ.

ಆಹಾರ ಔಟ್ ಲೆಟ್ ಗಳಿಗೆ ಸಂಬಂಧಿಸಿದ ಆದೇಶ ಇದಾಗಿದೆ. ಲೋಕೋಪಯೋಗಿ ನಗರ ಇಲಾಖೆ ಹಾಗೂ ಪುರಸಭಾ ನಿಗಮದೊಂದಿಗೆ ಸಭೆ ನಡೆಸಿದ ಬಳಿಕ ಔಟ್ ಲೆಟ್ ಗಳ ವ್ಯಾಪಾರಿಗಳು ತಮ್ಮ ಗುರುತನ್ನು ಬಹಿರಂಗಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ, ಸಚಿವ ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.

ರಸ್ತೆ ಬದಿಗಳಲ್ಲಿ ಮಾರಾಟ ಮಾಡುವ ಆಹಾರದ ಶುದ್ಧತೆ ಬಗ್ಗೆ ಅನುಮಾನಗಳು ಮೂಡುತ್ತಿರುವುದರ ಬಗ್ಗೆ ಜನತೆ ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಕ್ರಮಾದಿತ್ಯ ಹೇಳಿದ್ದಾರೆ. ಜನರು ಕಳವಳ, ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಉತ್ತರ ಪ್ರದೇಶ ಮಾದರಿಯ ನೀತಿಯನ್ನು ಜಾರಿಗೊಳಿಸಲು ನಾವು ನಿರ್ಧರಿಸಿದ್ದೇವೆ ಎಂದು ವಿಕ್ರಮಾದಿತ್ಯ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಆಹಾರ ಔಟ್ ಲೆಟ್ ಗಳ ಮಾಲಿಕರು ತಮ್ಮ ಹೆಸರುಗಳನ್ನು, ಗುರುತುಗಳನ್ನು ಘೋಷಿಸುವುದನ್ನು ಕಡ್ಡಾಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT