ಶಿವಸೇನೆ ನಾಯಕ ಸಂಜಯ್ ರಾವತ್ 
ದೇಶ

ಮಾನನಷ್ಟ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್'ಗೆ 15 ದಿನ ಜೈಲು ಶಿಕ್ಷೆ, 25 ಸಾವಿರ ರೂ ದಂಡ

ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಅವರ ಪತ್ನಿ ಡಾ.ಮೇಧಾ ಕಿರಿಟ್ ಸೋಮಯ್ಯ ಅವರ ದೂರಿನ ಮೇರೆಗೆ ರಾವತ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮುಂಬೈ: ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಉದ್ಧವ್ ಬಣ) ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರನ್ನು ದೋಷಿ ಎಂದು ಘೋಷಿಸಿರುವ ಮುಂಬೈನ ಮಝಗಾಂವ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್, 15 ದಿನಗಳ ಸೆರೆವಾಸ ಮತ್ತು ರೂ. 25,000 ದಂಡ ವಿಧಿಸಿದೆ.

ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಅವರ ಪತ್ನಿ ಡಾ.ಮೇಧಾ ಕಿರಿಟ್ ಸೋಮಯ್ಯ ಅವರ ದೂರಿನ ಮೇರೆಗೆ ರಾವತ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮೀರಾ ಭಯಂದರ್‌ನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಗೆ ಸಂಬಂಧಿಸಿದ 100 ಕೋಟಿ ರೂ. ಹಗರಣದಲ್ಲಿ ತಾನು ಮತ್ತು ತನ್ನ ಪತಿ ಭಾಗಿಯಾಗಿದ್ದಾರೆ ಎಂದು ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ರಾವತ್ ಮಾಡಿದ್ದಾರೆ ಎಂದು ಆರೋಪಿಸಿ ಮೇಧಾ ಸೋಮಯ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಜನಸಾಮಾನ್ಯರ ಮುಂದೆ ನನ್ನ ವರ್ಚಸ್ಸು ಹಾಳು ಮಾಡಲು ಆರೋಪ ಮಾಡಲಾಗಿದೆ ಎಂದು ಹೇಳಿದ್ದರು.

ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು, 25,000 ರೂ. ದಂಡ ವಿಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಛತ್ತೀಸಗಢ: IED ಸ್ಫೋಟದಲ್ಲಿ ನಾಲ್ವರು ಯೋಧರು ಹುತಾತ್ಮ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ!

ಶೃಂಗೇರಿ ವಿಧಾನಸಭಾ ಚುನಾವಣೆ ಮರು ಎಣಿಕೆ: Congress ಅಭ್ಯರ್ಥಿ ಟಿಡಿ ರಾಜೇಗೌಡಗೆ ಗೆಲುವು!

ಹಾರ್ಮುಜ್ ಜಲಸಂಧಿ ಮೂಲಕ ತೆರಳಲು ಇರಾನ್‌ಗೆ ಹಣ ಪಾವತಿಸಿದರೆ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ; ಅಮೆರಿಕ ಎಚ್ಚರಿಕೆ

ಪಾಕ್‌ನಲ್ಲಿ ಧುರಂಧರರ ಆರ್ಭಟ: ಮೊನ್ನೆ ಜೈಶ್ ಉಗ್ರ, ನಿನ್ನೆ ಹಿಜ್ಬುಲ್ ಟಾಪ್ ಕಮಾಂಡರ್‌ಗೆ ಗುಂಡಿಟ್ಟು ಹತ್ಯೆ!

'ನಾನು ಅಷ್ಟು ಹೆದರಿದ್ದೆ': ವೈಭವ್ ಸೂರ್ಯವಂಶಿ ಮುಂದೆ ಅತಿರೇಕದ ಸಂಭ್ರಮಾಚರಣೆಗೆ ಉತ್ತರ ಕೊಟ್ಟ ಕೈಲ್ ಜೇಮಿಸನ್, Video!

SCROLL FOR NEXT