ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಸಹಸ್ರಾರು ಜನರಿಗೆ 300 ಕೋಟಿ ರೂ ವಂಚನೆ; ಸ್ವಾಮೀಜಿ ಸೋಗಿನಲ್ಲಿದ್ದ ವ್ಯಕ್ತಿಯ ಬಂಧನ!

ವೃಂದಾವನದ ಕೃಷ್ಣ ಬಲರಾಮ ದೇವಸ್ಥಾನದ ಬಳಿ ವೃಂದಾವನ ಮತ್ತು ಬೀಡ್ ಜಿಲ್ಲಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಬನ್ ವಿಶ್ವನಾಥ್ ಶಿಂಧೆ ಅವರನ್ನು ಬಂಧಿಸಿದ್ದಾರೆ.

ಮಥುರಾ: ಮಹಾರಾಷ್ಟ್ರದಲ್ಲಿ ಸಾವಿರಾರು ಜನರಿಗೆ ರೂ. 300 ಕೋಟಿಗೂ ಅಧಿಕ ವಂಚಿಸಿದ್ದ ವ್ಯಕ್ತಿಯೊಬ್ಬ ಬಂಧನದಿಂದ ತಪ್ಪಿಸಿಕೊಳ್ಳಲು ಮಥುರಾದಲ್ಲಿ ಸ್ವಾಮೀಜಿ ಸೋಗಿನಲ್ಲಿ ವಾಸಿಸುತ್ತಿದ್ದುದನ್ನು ಪತ್ತೆ ಹಚ್ಚಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ವೃಂದಾವನದ ಕೃಷ್ಣ ಬಲರಾಮ ದೇವಸ್ಥಾನದ ಬಳಿ ವೃಂದಾವನ ಮತ್ತು ಬೀಡ್ ಜಿಲ್ಲಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಬನ್ ವಿಶ್ವನಾಥ್ ಶಿಂಧೆ ಅವರನ್ನು ಬಂಧಿಸಿದ್ದಾರೆ.

ಸುಮಾರು ರೂ. 300 ಕೋಟಿಗೂ ಅಧಿಕ ವಂಚನೆಯಲ್ಲಿ ಹಲವು ಎಫ್ ಐಐರ್ ಗಳಿಗೆ ಸಂಬಂಧಿಸಿದಂತೆ ಶಿಂಧೆ ಪೊಲೀಸರಿಗೆ ಬೇಕಾಗಿದ್ದಾರೆ ಎಂದು ಮಥುರಾ ಪೊಲೀಸರು ತಿಳಿಸಿದ್ದಾರೆ.

ಶಿಂಧೆ ಸ್ವಾಮೀಜಿ ಸೋಗಿನಲ್ಲಿ ದೆಹಲಿ, ಅಸ್ಸಾಂ, ನೇಪಾಳ ಮತ್ತು ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ತಲೆಮರೆಸಿಕೊಂಡಿದ್ದ. ಕೊನೆಗೆ ಆತ ವೃಂದಾವನದಲ್ಲಿ ಅಡಗಿರುವುದು ಕಂಡುಬಂದಿತು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಕುಮಾರ್ ಸಿಂಗ್ ಹೇಳಿದ್ದಾರೆ.

ಮಂಗಳವಾರ ತಡರಾತ್ರಿ ಬಂಧಿಸಲಾಗಿದ್ದ ಶಿಂಧೆ ಅವರನ್ನು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಬುಧವಾರ ಹಾಜರುಪಡಿಸಲಾಯಿತು. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಪರಾಧ ವಿಭಾಗದ ತಂಡವು ಮಥುರಾ ನ್ಯಾಯಾಲಯದಿಂದ ಟ್ರಾನ್ಸಿಟ್ ರಿಮಾಂಡ್ ಪಡೆದ ನಂತರ ಆತನನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT