ರಾಹುಲ್ ಗಾಂಧಿ 
ದೇಶ

ಹರಿಯಾಣದಲ್ಲಿ ದಶಕದ ನೋವನ್ನು ಕಾಂಗ್ರೆಸ್ ಸರ್ಕಾರ ಕೊನೆಗೊಳಿಸಲಿದೆ: ರಾಹುಲ್ ಗಾಂಧಿ

ಅಕ್ಟೋಬರ್ 5 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಹರಿಯಾಣ ಕಾಂಗ್ರೆಸ್ ತನ್ನ ವಿವರವಾದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ನಂತರ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಹರಿಯಾಣದಲ್ಲಿ ಮುಂಬರಲಿರುವ ಕಾಂಗ್ರೆಸ್ ಸರ್ಕಾರ ದಶಕದ ನೋವನ್ನು ಕೊನೆಗೊಳಿಸಲಿದೆ. ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಪಕ್ಷ ಸಂಕಲ್ಪ ಮಾಡಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಅಕ್ಟೋಬರ್ 5 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಹರಿಯಾಣ ಕಾಂಗ್ರೆಸ್ ತನ್ನ ವಿವರವಾದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ನಂತರ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ರೈತರ ಕಲ್ಯಾಣಕ್ಕಾಗಿ ಆಯೋಗ ಸ್ಥಾಪನೆ, ಹುತಾತ್ಮ ಯೋಧರ ಕುಟುಂಬಗಳಿಗೆ 2 ಕೋಟಿ ರೂ. ಆರ್ಥಿಕ ನೆರವು, ಉದ್ಯೋಗ ಸೃಷ್ಟಿಸಲು ಕಾರ್ಮಿಕ ಘಟಕಗಳಿಗೆ ಉತ್ತೇಜನ, ಹರಿಯಾಣ ಅಲ್ಪಸಂಖ್ಯಾತ ಆಯೋಗದ ಪುನರ್ ರಚನೆ ಕಾಂಗ್ರೆಸ್ ಪಕ್ಷದ ಪ್ರಮುಖ ಭರವಸೆಗಳಾಗಿವೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಒಂದು ದಶಕದ ಅವಧಿಯಲ್ಲಿ ಬಿಜೆಪಿ ಹರಿಯಾಣದ ಸೌಹಾರ್ದತೆ, ಕನಸು ಮತ್ತು ಅಧಿಕಾರವನ್ನು ಕಿತ್ತುಕಂಡಿದೆ ಎಂದು ಅವರು ಆರೋಪಿಸಿದ್ದಾರೆ. ಅಗ್ನಿವೀರ್ ಯೋಜನೆ ದೇಶಭಕ್ತ ಯುವ ಜನರ ಆಕಾಂಕ್ಷೆಗಳನ್ನು ಕಸಿದುಕೊಂಡಿದೆ. ನಿರುದ್ಯೋಗ ಕುಟುಂಬಗಳ ನಗುವನ್ನು ಕಿತ್ತುಕೊಂಡಿದೆ ಮತ್ತು ಹಣದುಬ್ಬರ ಮಹಿಳೆಯರ ಸ್ವಾವಲಂಬನೆಯನ್ನು ಕಿತ್ತುಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.

"ಕಪ್ಪು ಕಾನೂನುಗಳನ್ನು ತರುವ ಮೂಲಕ ಬಿಜೆಪಿಯವರು ರೈತರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಿದರು. ನೋಟು ಅಮಾನ್ಯೀಕರಣ ಮತ್ತು ತಪ್ಪಾದ ಜಿಎಸ್ ಟಿ ಜಾರಿ ಮೂಲಕ ಲಕ್ಷಾಂತರ ಸಣ್ಣ ವ್ಯಾಪಾರಿಗಳ ಲಾಭವನ್ನು ಕಸಿದುಕೊಂಡರು. ತಮ್ಮ ಸ್ನೇಹಿತರಿಗೆ ಅನುಕೂಲವಾಗುವಂತೆ ಹರಿಯಾಣದ ಸ್ವಾಭಿಮಾನವನ್ನು ಕಿತ್ತುಕೊಂಡರು ಎಂದು ಗಾಂಧಿ ಟೀಕಿಸಿದ್ದಾರೆ.

"ಮುಂಬರುವ ಕಾಂಗ್ರೆಸ್ ಸರ್ಕಾರ ದಶಕದ ನೋವನ್ನು ಕೊನೆಗೊಳಿಸುತ್ತದೆ, ಪ್ರತಿಯೊಬ್ಬ ಹರಿಯಾಣ ನಿವಾಸಿಗಳ ಭರವಸೆ, ಆಕಾಂಕ್ಷೆಗಳು ಮತ್ತು ಕನಸುಗಳನ್ನು ಈಡೇರಿಸುವುದು ನಮ್ಮ ಸಂಕಲ್ಪವಾಗಿದೆ" ಎಂದು ಅವರು ಹೇಳಿದ್ದಾರೆ. ಅಕ್ಟೋಬರ್ 5 ರಂದು ಹರಿಯಾಣ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT