ರಾಹುಲ್ ಗಾಂಧಿ 
ದೇಶ

ಹರಿಯಾಣದಲ್ಲಿ ದಶಕದ ನೋವನ್ನು ಕಾಂಗ್ರೆಸ್ ಸರ್ಕಾರ ಕೊನೆಗೊಳಿಸಲಿದೆ: ರಾಹುಲ್ ಗಾಂಧಿ

ಅಕ್ಟೋಬರ್ 5 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಹರಿಯಾಣ ಕಾಂಗ್ರೆಸ್ ತನ್ನ ವಿವರವಾದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ನಂತರ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಹರಿಯಾಣದಲ್ಲಿ ಮುಂಬರಲಿರುವ ಕಾಂಗ್ರೆಸ್ ಸರ್ಕಾರ ದಶಕದ ನೋವನ್ನು ಕೊನೆಗೊಳಿಸಲಿದೆ. ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಪಕ್ಷ ಸಂಕಲ್ಪ ಮಾಡಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಅಕ್ಟೋಬರ್ 5 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಹರಿಯಾಣ ಕಾಂಗ್ರೆಸ್ ತನ್ನ ವಿವರವಾದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ನಂತರ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ರೈತರ ಕಲ್ಯಾಣಕ್ಕಾಗಿ ಆಯೋಗ ಸ್ಥಾಪನೆ, ಹುತಾತ್ಮ ಯೋಧರ ಕುಟುಂಬಗಳಿಗೆ 2 ಕೋಟಿ ರೂ. ಆರ್ಥಿಕ ನೆರವು, ಉದ್ಯೋಗ ಸೃಷ್ಟಿಸಲು ಕಾರ್ಮಿಕ ಘಟಕಗಳಿಗೆ ಉತ್ತೇಜನ, ಹರಿಯಾಣ ಅಲ್ಪಸಂಖ್ಯಾತ ಆಯೋಗದ ಪುನರ್ ರಚನೆ ಕಾಂಗ್ರೆಸ್ ಪಕ್ಷದ ಪ್ರಮುಖ ಭರವಸೆಗಳಾಗಿವೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಒಂದು ದಶಕದ ಅವಧಿಯಲ್ಲಿ ಬಿಜೆಪಿ ಹರಿಯಾಣದ ಸೌಹಾರ್ದತೆ, ಕನಸು ಮತ್ತು ಅಧಿಕಾರವನ್ನು ಕಿತ್ತುಕಂಡಿದೆ ಎಂದು ಅವರು ಆರೋಪಿಸಿದ್ದಾರೆ. ಅಗ್ನಿವೀರ್ ಯೋಜನೆ ದೇಶಭಕ್ತ ಯುವ ಜನರ ಆಕಾಂಕ್ಷೆಗಳನ್ನು ಕಸಿದುಕೊಂಡಿದೆ. ನಿರುದ್ಯೋಗ ಕುಟುಂಬಗಳ ನಗುವನ್ನು ಕಿತ್ತುಕೊಂಡಿದೆ ಮತ್ತು ಹಣದುಬ್ಬರ ಮಹಿಳೆಯರ ಸ್ವಾವಲಂಬನೆಯನ್ನು ಕಿತ್ತುಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.

"ಕಪ್ಪು ಕಾನೂನುಗಳನ್ನು ತರುವ ಮೂಲಕ ಬಿಜೆಪಿಯವರು ರೈತರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಿದರು. ನೋಟು ಅಮಾನ್ಯೀಕರಣ ಮತ್ತು ತಪ್ಪಾದ ಜಿಎಸ್ ಟಿ ಜಾರಿ ಮೂಲಕ ಲಕ್ಷಾಂತರ ಸಣ್ಣ ವ್ಯಾಪಾರಿಗಳ ಲಾಭವನ್ನು ಕಸಿದುಕೊಂಡರು. ತಮ್ಮ ಸ್ನೇಹಿತರಿಗೆ ಅನುಕೂಲವಾಗುವಂತೆ ಹರಿಯಾಣದ ಸ್ವಾಭಿಮಾನವನ್ನು ಕಿತ್ತುಕೊಂಡರು ಎಂದು ಗಾಂಧಿ ಟೀಕಿಸಿದ್ದಾರೆ.

"ಮುಂಬರುವ ಕಾಂಗ್ರೆಸ್ ಸರ್ಕಾರ ದಶಕದ ನೋವನ್ನು ಕೊನೆಗೊಳಿಸುತ್ತದೆ, ಪ್ರತಿಯೊಬ್ಬ ಹರಿಯಾಣ ನಿವಾಸಿಗಳ ಭರವಸೆ, ಆಕಾಂಕ್ಷೆಗಳು ಮತ್ತು ಕನಸುಗಳನ್ನು ಈಡೇರಿಸುವುದು ನಮ್ಮ ಸಂಕಲ್ಪವಾಗಿದೆ" ಎಂದು ಅವರು ಹೇಳಿದ್ದಾರೆ. ಅಕ್ಟೋಬರ್ 5 ರಂದು ಹರಿಯಾಣ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT