ಸಂಗ್ರಹ ಚಿತ್ರ 
ದೇಶ

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಐವರು ಯೋಧರಿಗೆ ಗಾಯ

ಐಇಡಿಗಳನ್ನು ಪತ್ತೆಹಚ್ಚಿ ನಿಷ್ಕ್ರಿಯಗೊಳಿಸಲು ನಡೆಸಿದ ಮೈನಿಂಗ್ ಕಾರ್ಯಾಚರಣೆಯಲ್ಲಿ, ಭದ್ರತಾ ಸಿಬ್ಬಂದಿಯೊಬ್ಬರ ಕಾಲಿಗೆ ಐಇಡಿ ಸಂಪರ್ಕ ಹೊಂದಿದ ತಂತಿ ತಗುಲಿದ ಪರಿಣಾಮ ಸ್ಫೋಟ ಸಂಭವಿಸಿದೆ.

ಬಿಜಾಪುರ: ನಕ್ಸಲರು ಅಡಗಿಸಿಟ್ಟಿದ್ದ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಗೊಂಡು ಐವರು ಭದ್ರತಾ ಸಿಬ್ಬಂದಿಗಳಿಗೆ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ವಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಚಿಂಗೆಲೂರು ಸಿಆರ್‌ಪಿಎಫ್ ಶಿಬಿರದಿಂದ ಭದ್ರತಾ ಸಿಬ್ಬಂದಿಯ ತಂಡವೊಂದು ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿಆರ್‌ಪಿಎಫ್ ಶಿಬಿರದಿಂದ ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಐಇಡಿ ಸ್ಪೋಟಗೊಂಡಿದೆ.

ಐಇಡಿಗಳನ್ನು ಪತ್ತೆಹಚ್ಚಿ ನಿಷ್ಕ್ರಿಯಗೊಳಿಸಲು ನಡೆಸಿದ ಮೈನಿಂಗ್ ಕಾರ್ಯಾಚರಣೆಯಲ್ಲಿ, ಭದ್ರತಾ ಸಿಬ್ಬಂದಿಯೊಬ್ಬರ ಕಾಲಿಗೆ ಐಇಡಿ ಸಂಪರ್ಕ ಹೊಂದಿದ ತಂತಿ ತಗುಲಿದ ಪರಿಣಾಮ ಸ್ಫೋಟ ಸಂಭವಿಸಿದೆ. ಪರಿಣಾಮ ಭದ್ರತಾ ಸಿಬ್ಬಂದಿಗಳಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT