ಸಂಗ್ರಹ ಚಿತ್ರ 
ದೇಶ

ಕಥುವಾ ಎನ್ಕೌಂಟರ್: ಓರ್ವ ಪೊಲೀಸ್ ಹುತಾತ್ಮ, ಇಬ್ಬರು ಅಧಿಕಾರಿಗಳಿಗೆ ಗಾಯ

ಭಯೋತ್ಪಾದಕರ ಗುಂಪೊಂದು ಮನೆಯೊಳಗೆ ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕಥುವಾ ಜಿಲ್ಲೆ ಕೋಗ್ (ಮಂಡ್ಲಿ) ಗ್ರಾಮದಲ್ಲಿ ಭದ್ರತೆಗಳು ಕಾರ್ಯಾಚರಣೆಗಿಳಿದಿದ್ದವು.

ಕಥುವಾ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಪೊಲೀಸ್ ಹುತಾತ್ಮರಾಗಿ ಇಬ್ಬರು ಅಧಿಕಾರಿಗು ಗಾಯಗೊಂಡಿದ್ದಾರೆ.

ಭಯೋತ್ಪಾದಕರ ಗುಂಪೊಂದು ಮನೆಯೊಳಗೆ ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕಥುವಾ ಜಿಲ್ಲೆ ಕೋಗ್ (ಮಂಡ್ಲಿ) ಗ್ರಾಮದಲ್ಲಿ ಭದ್ರತೆಗಳು ಕಾರ್ಯಾಚರಣೆಗಿಳಿದಿದ್ದವು.

ಥುವಾದಲ್ಲಿನ ಬಿಲ್ಲವರ್ ಪೊಲೀಸ್ ಠಾಣೆ ವ್ಯಾಪ್ತಿಯ ಕೋಗ್ (ಮಂಡ್ಲಿ) ಗ್ರಾಮದಲ್ಲಿ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು.

ಭದ್ರತಾ ಪಡೆಗಳ ಜಂಟಿ ತಂಡವು ಉಗ್ರರು ಅಡಗಿದ್ದ ಸ್ಥಳವನ್ನು ಸಮೀಪಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ಈ ವೇಲೆ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ಆರಂಭವಾಗಿದ್ದು, ಕಾರ್ಯಾಚರಣೆಗೆ ಮತ್ತಷ್ಟು ಸೇನಾಪಡೆ ಸ್ಥಳಕ್ಕೆ ಧಾವಿಸಿವೆ.

ಗುಂಡಿನ ಚಕಮಕಿ ವೇಳೆ ಮುಖ್ಯ ಪೇದೆ ಹೆಚ್'ಸಿ.ಬಷೀರ್ ಅಹ್ಮದ್ ಅವರು ಹುತಾತ್ಮರಾಗಿದ್ದು, ಎಎಸ್ಐ ಹಾಗೂ ಮತ್ತೋರ್ವ ಅಧಿಕಾರಿ ಗಾಯಗೊಂಡಿದ್ದಾರೆಂದು ಸಹಾಯಕ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಅವರು ಹೇಳಿದ್ದಾರೆ.

ಏತನ್ಮಧ್ಯೆ, ಕುಲ್ಗಾಮ್ ನಲ್ಲಿ ಶನಿವಾರ ನಡೆಸಿದ ಎನ್ಕೌಂಟರ್ ನಲ್ಲಿ ಹತ್ಯೆಯಾದ ಇಬ್ಬರು ಉಗ್ರರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹಗಳನ್ನು ಗುರುತಿಸಲು, ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ದಕ್ಷಿಣ ಕಾಶ್ಮೀರದ ಡಿಐಜಿ ಜಾವೇದ್ ಅಹ್ಮದ್ ಮಾತೂ ಹೇಳಿದ್ದಾರೆ,

ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಭದ್ರತಾ ಪಡೆಗಳು 2 ಎಕೆ 47 ರೈಫಲ್‌ಗಳು, 5 ಮ್ಯಾಗಜೀನ್‌ಗಳು, ಪಿಸ್ತೂಲ್, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ತಿಳಿಸಿದ್ದಾರೆ.

ಇಬ್ಬರು ಭಯೋತ್ಪಾದಕರ ಪೈಕಿ ಓರ್ವನನ್ನು ಕುಲ್ಗಾಮ್‌ನ ಚವಾಲ್ಗಾಮ್ ಗ್ರಾಮದ ನಿವಾಸಿ ಉಮೇಶ್ ಅಹ್ಮದ್ ವಾನಿ ಎಂದು ಶಂಕಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ನಡುವೆ ಇದೇ ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದ ಮೂವರು ಸೇನಾ ಸಿಬ್ಬಂದಿ ಮತ್ತು ಒಬ್ಬ ಪೊಲೀಸ್ ಸಿಬ್ಬಂದಿ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT