ಮಲ್ಲಿಕಾರ್ಜುನ್ ಖರ್ಗೆ 
ದೇಶ

ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯಲ್ಲ: ವೇದಿಕೆ ಮೇಲೆ ಕುಸಿದು ಬಿದ್ದ ಖರ್ಗೆ, ವಿಡಿಯೋ ವೈರಲ್!

ನನಗೆ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಹೇಳಿದರು. ಅಲ್ಲದೆ ಭಾಷಣದ ವೇಳೆ ಖರ್ಗೆ ಅಸ್ವಸ್ಥರಾಗಿ ವೇದಿಗೆ ಮೇಲೆ ಕುಸಿದು ಬಿದ್ದರು.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 'ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ಮಾಡುತ್ತೇವೆ. ನನಗೆ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಹೇಳಿದರು. ಅಲ್ಲದೆ ಭಾಷಣದ ವೇಳೆ ಖರ್ಗೆ ಅಸ್ವಸ್ಥರಾಗಿ ವೇದಿಗೆ ಮೇಲೆ ಕುಸಿದು ಬಿದ್ದರು.

ಬಿಜೆಪಿಯನ್ನು ಗುರಿಯಾಗಿಟ್ಟುಕೊಂಡ ಖರ್ಗೆ, ಬಿಜೆಪಿಗರು ಎಂದಿಗೂ ಚುನಾವಣೆ ನಡೆಸಲು ಬಯಸುವುದಿಲ್ಲ. ಆದರೆ ಅವರು ಬಯಸಿದರೆ, ಅದನ್ನು ಒಂದು ಅಥವಾ ಎರಡು ವರ್ಷಗಳಲ್ಲಿ ಮಾಡಬಹುದಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶದ ನಂತರ ಅವರು ಚುನಾವಣೆಗೆ ತಯಾರಿ ಆರಂಭಿಸಿದರು. ಅವರು ಖಂಡಿತವಾಗಿಯೂ ಚುನಾವಣೆಯನ್ನು ಬಯಸಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಗರು ಲೆಫ್ಟಿನೆಂಟ್ ಗವರ್ನರ್ ಮೂಲಕ ರಿಮೋಟ್-ನಿಯಂತ್ರಿತ ಸರ್ಕಾರವನ್ನು ನಡೆಸಲು ಬಯಸಿದ್ದರು. ಪ್ರಧಾನಿ ಮೋದಿ ಕಳೆದ 10 ವರ್ಷಗಳಲ್ಲಿ ಭಾರತದ ಯುವಕರಿಗೆ ಏನನ್ನೂ ನೀಡಿಲ್ಲ. 10 ವರ್ಷಗಳಲ್ಲಿ ನಿಮ್ಮ ಸಮೃದ್ಧಿಯನ್ನು ಮರಳಿ ತರಲು ಸಾಧ್ಯವಾಗದ ವ್ಯಕ್ತಿಯನ್ನು ನೀವು ನಂಬಬಹುದೇ? ಯಾವುದೇ ಬಿಜೆಪಿ ನಾಯಕರು ನಿಮ್ಮ ಮುಂದೆ ಬಂದರೆ, ಅವರು ಪ್ರಗತಿ ತಂದಿದ್ದಾರೋ ಇಲ್ಲವೋ ಕೇಳಿ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!