ಅಮಿತ್ ಶಾ PTI
ದೇಶ

ಕರ್ನಾಟಕ, ಹಿಮಾಚಲ ಪ್ರದೇಶದಲ್ಲಿ ರಾಹುಲ್ ಗಾಂಧಿ ಗ್ಯಾರಂಟಿಗಳು ವಿಫಲವಾಗಿದೆ: ಅಮಿತ್ ಶಾ

ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ. ಆದರೆ ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಚುನಾವಣಾ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ರಾಹುಲ್ ಗಾಂಧಿ ಅವರ ಭರವಸೆಗಳು ವಿಫಲವಾಗಿವೆ ಎಂದು ಶಾ ಹೇಳಿದರು.

ಚಂಡೀಗಢ: ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಂತಹ ರಾಜ್ಯಗಳಲ್ಲಿ ರಾಹುಲ್ ಗಾಂಧಿ ಅವರ ಚುನಾವಣಾ ಖಾತರಿಗಳು ವಿಫಲವಾಗಿವೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹರಿಯಾಣದಲ್ಲಿ ಕಾಂಗ್ರೆಸ್ ವಿರುದ್ಧ ಭಾನುವಾರ ವಾಗ್ದಾಳಿ ಮುಂದುವರೆಸಿದ್ದಾರೆ.

ಗುರುಗ್ರಾಮ್‌ನ ಬಾದ್‌ಶಹಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ. ಆದರೆ ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಚುನಾವಣಾ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ರಾಹುಲ್ ಗಾಂಧಿ ಅವರ ಭರವಸೆಗಳು ವಿಫಲವಾಗಿವೆ ಎಂದು ಶಾ ಹೇಳಿದರು.

ಮತ್ತೊಂದೆಡೆ, ಬಿಜೆಪಿ ಯಾವುದೇ ಭರವಸೆ ನೀಡುವುದಿಲ್ಲ, ಆದರೆ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತದೆ ಎಂದರು. "ರಾಹುಲ್ ಬಾಬಾ ಮತ್ತು ಕಂಪನಿಯು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ" ಮತ್ತು ಕೇವಲ 'ಡಬಲ್ ಎಂಜಿನ್' ಸರ್ಕಾರವು ಹರಿಯಾಣದ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ ಎಂದು ಅವರು ಹೇಳಿದರು. "ನಾವು ದೇಶದ ಗಡಿಗಳನ್ನು ಸುರಕ್ಷಿತವಾಗಿರಿಸುತ್ತೇವೆ, ಮೀಸಲಾತಿಗಳನ್ನು ರಕ್ಷಿಸುತ್ತೇವೆ. 370ನೇ ವಿಧಿಯನ್ನು ಹಿಂತಿರುಗಿಸಲು ಎಂದಿಗೂ ಸಾಧ್ಯವಿಲ್ಲ ಎಂದು ಶಾ ಹೇಳಿದರು.

ರ್ಯಾಲಿ ವೇಳೆ ವಕ್ಫ್ ಮಸೂದೆ ಬಗ್ಗೆ ಉಲ್ಲೇಖಿಸಿದ ಶಾ, "ವಕ್ಫ್ ಮಂಡಳಿಯಲ್ಲಿ ಈಗಿರುವ ಶಾಸನದಿಂದ ನಿಮಗೆ ಸಮಸ್ಯೆ ಇದೆ... ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ನಾವು ಅದನ್ನು ತಿದ್ದುಪಡಿ ಮಾಡುತ್ತೇವೆ" ಎಂದು ಹೇಳಿದರು. ಕಳೆದ ತಿಂಗಳು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆಯು ಸಮಾಜದಲ್ಲಿ ಒಡಕು ಮೂಡಿಸುವ ಗುರಿಯನ್ನು ಹೊಂದಿದೆ ಎಂದು ಹಲವು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದರು ಮತ್ತು ಅದನ್ನು ಬಲವಾಗಿ ವಿರೋಧಿಸುವುದಾಗಿ ಹೇಳಿದ್ದರು ಎಂದು ಶಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT