ಅಮಿತ್ ಶಾ PTI
ದೇಶ

ಕರ್ನಾಟಕ, ಹಿಮಾಚಲ ಪ್ರದೇಶದಲ್ಲಿ ರಾಹುಲ್ ಗಾಂಧಿ ಗ್ಯಾರಂಟಿಗಳು ವಿಫಲವಾಗಿದೆ: ಅಮಿತ್ ಶಾ

ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ. ಆದರೆ ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಚುನಾವಣಾ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ರಾಹುಲ್ ಗಾಂಧಿ ಅವರ ಭರವಸೆಗಳು ವಿಫಲವಾಗಿವೆ ಎಂದು ಶಾ ಹೇಳಿದರು.

ಚಂಡೀಗಢ: ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಂತಹ ರಾಜ್ಯಗಳಲ್ಲಿ ರಾಹುಲ್ ಗಾಂಧಿ ಅವರ ಚುನಾವಣಾ ಖಾತರಿಗಳು ವಿಫಲವಾಗಿವೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹರಿಯಾಣದಲ್ಲಿ ಕಾಂಗ್ರೆಸ್ ವಿರುದ್ಧ ಭಾನುವಾರ ವಾಗ್ದಾಳಿ ಮುಂದುವರೆಸಿದ್ದಾರೆ.

ಗುರುಗ್ರಾಮ್‌ನ ಬಾದ್‌ಶಹಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ. ಆದರೆ ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಚುನಾವಣಾ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ರಾಹುಲ್ ಗಾಂಧಿ ಅವರ ಭರವಸೆಗಳು ವಿಫಲವಾಗಿವೆ ಎಂದು ಶಾ ಹೇಳಿದರು.

ಮತ್ತೊಂದೆಡೆ, ಬಿಜೆಪಿ ಯಾವುದೇ ಭರವಸೆ ನೀಡುವುದಿಲ್ಲ, ಆದರೆ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತದೆ ಎಂದರು. "ರಾಹುಲ್ ಬಾಬಾ ಮತ್ತು ಕಂಪನಿಯು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ" ಮತ್ತು ಕೇವಲ 'ಡಬಲ್ ಎಂಜಿನ್' ಸರ್ಕಾರವು ಹರಿಯಾಣದ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ ಎಂದು ಅವರು ಹೇಳಿದರು. "ನಾವು ದೇಶದ ಗಡಿಗಳನ್ನು ಸುರಕ್ಷಿತವಾಗಿರಿಸುತ್ತೇವೆ, ಮೀಸಲಾತಿಗಳನ್ನು ರಕ್ಷಿಸುತ್ತೇವೆ. 370ನೇ ವಿಧಿಯನ್ನು ಹಿಂತಿರುಗಿಸಲು ಎಂದಿಗೂ ಸಾಧ್ಯವಿಲ್ಲ ಎಂದು ಶಾ ಹೇಳಿದರು.

ರ್ಯಾಲಿ ವೇಳೆ ವಕ್ಫ್ ಮಸೂದೆ ಬಗ್ಗೆ ಉಲ್ಲೇಖಿಸಿದ ಶಾ, "ವಕ್ಫ್ ಮಂಡಳಿಯಲ್ಲಿ ಈಗಿರುವ ಶಾಸನದಿಂದ ನಿಮಗೆ ಸಮಸ್ಯೆ ಇದೆ... ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ನಾವು ಅದನ್ನು ತಿದ್ದುಪಡಿ ಮಾಡುತ್ತೇವೆ" ಎಂದು ಹೇಳಿದರು. ಕಳೆದ ತಿಂಗಳು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆಯು ಸಮಾಜದಲ್ಲಿ ಒಡಕು ಮೂಡಿಸುವ ಗುರಿಯನ್ನು ಹೊಂದಿದೆ ಎಂದು ಹಲವು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದರು ಮತ್ತು ಅದನ್ನು ಬಲವಾಗಿ ವಿರೋಧಿಸುವುದಾಗಿ ಹೇಳಿದ್ದರು ಎಂದು ಶಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT