ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ನೂತನವಾಗಿ ನೇಮಕಗೊಂಡ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. 
ದೇಶ

ಚೆನ್ನೈ: ಉದಯನಿಧಿ ಡಿಸಿಎಂ, ಸೆಂಥಿಲ್ ಬಾಲಾಜಿ ಸೇರಿ ನಾಲ್ವರು ಸಚಿವರಾಗಿ ಪ್ರಮಾಣ ವಚನ

ಬಾಲಾಜಿ ಮತ್ತು ಇತರ ಮೂವರು ಡಿಎಂಕೆ ಶಾಸಕರು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಅವರ ಪುತ್ರ ಉದಯನಿಧಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು, ಉದಯನಿಧಿ ಅವರು ಈಗಾಗಲೇ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ.

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಡಿಎಂಕೆ ನಾಯಕ ವಿ ಸೆಂಥಿಲ್ ಬಾಲಾಜಿ ಅವರು ಭಾನುವಾರ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರಿಂದ ಸಚಿವರಾಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಿದರು.

ಬಾಲಾಜಿ ಮತ್ತು ಇತರ ಮೂವರು ಡಿಎಂಕೆ ಶಾಸಕರು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಅವರ ಪುತ್ರ ಉದಯನಿಧಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು, ಉದಯನಿಧಿ ಅವರು ಈಗಾಗಲೇ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುದೀರ್ಘ ಅವಧಿಗೆ ಬಂಧಿತರಾಗಿದ್ದ ಬಾಲಾಜಿ ಹಾಗೂ ಕಳೆದ ವರ್ಷ ಸಂಪುಟದಿಂದ ವಜಾಗೊಂಡಿದ್ದ ನಾಸರ್ ಇಬ್ಬರೂ ಮತ್ತೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ತಿರುವಿಡೈಮರುದೂರು ಮೀಸಲು ಕ್ಷೇತ್ರದ ಶಾಸಕ ಮತ್ತು ಹಾಲಿ ಸರ್ಕಾರದ ಮುಖ್ಯ ಸಚೇತಕ ಗೋವಿ ಚೆಜಿಯಾನ್ ಸಂಪುಟದಲ್ಲಿ ಸೇರ್ಪಡೆಗೊಂಡ ಹೊಸಬರಾಗಿದ್ದಾರೆ.

ರಾಜಭವನದಲ್ಲಿ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರ ಖಾತೆಗಳನ್ನು ಘೋಷಿಸಲಾಗಿದ್ದು, ವಿ.ಸೆಂಥಿಲಬಾಲಾಜಿ ಅವರಿಗೆ ವಿದ್ಯುತ್, ನಿಷೇಧ ಮತ್ತು ಅಬಕಾರಿ ಸಚಿವರನ್ನಾಗಿ ನೇಮಿಸಲಾಗಿದೆ. ಅವರು ವಿದ್ಯುತ್ ಮತ್ತು ಸಾಂಪ್ರದಾಯಿಕವಲ್ಲದ ಇಂಧನ ಅಭಿವೃದ್ಧಿಗೆ ಸಂಬಂಧಿಸಿದ ನಿರ್ಣಾಯಕ ಖಾತೆಯ ಮೇಲ್ವಿಚಾರಣೆ ಮಾಡುತ್ತಾರೆ.

ತಿರುವಿಡೈಮರುದೂರ್ ನ್ನು ಪ್ರತಿನಿಧಿಸುವ ಡಾ. ಗೋವಿ ಚೆಜಿಯಾನ್ ಅವರನ್ನು ಉನ್ನತ ಶಿಕ್ಷಣ ಸಚಿವರನ್ನಾಗಿ ನೇಮಿಸಲಾಗಿದೆ, ಅಲ್ಲಿ ಅವರು ತಾಂತ್ರಿಕ ಶಿಕ್ಷಣ, ಎಲೆಕ್ಟ್ರಾನಿಕ್ಸ್, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ವಹಿಸಿಕೊಳ್ಳಲಿದ್ದಾರೆ.

ಸೇಲಂ ಉತ್ತರ ಕ್ಷೇತ್ರದಿಂದ ಆರ್.ರಾಜೇಂದ್ರನ್ ಅವರನ್ನು ಪ್ರವಾಸೋದ್ಯಮ ಸಚಿವರನ್ನಾಗಿ ನೇಮಿಸಲಾಗಿದೆ, ಅಬಕಾರಿ ಮತ್ತು ಅಭಿವೃದ್ಧಿ ಸೇರಿದಂತೆ ಪ್ರವಾಸೋದ್ಯಮ ಮತ್ತು ಸಕ್ಕರೆ ಖಾತೆಯ ಜವಾಬ್ದಾರಿಯನ್ನು ವಹಿಸಲಾಗಿದೆ.

ಎಸ್.ಎಂ. ಆವಡಿ ಕ್ಷೇತ್ರವನ್ನು ಪ್ರತಿನಿಧಿಸುವ ನಾಸರ್ ಅವರು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಅನಿವಾಸಿ ತಮಿಳರ ಕಲ್ಯಾಣ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ, ಅನಿವಾಸಿ ತಮಿಳರ ಕಲ್ಯಾಣ, ಹಾಗೆಯೇ ನಿರಾಶ್ರಿತರು, ಸ್ಥಳಾಂತರಗೊಂಡವರು ಮತ್ತು ವಕ್ಫ್ ಮಂಡಳಿಗೆ ಸಂಬಂಧಿಸಿದ ವ್ಯವಹಾರಗಳನ್ನು ನಿರ್ವಹಿಸಲಿದ್ದಾರೆ.

ಮೂವರನ್ನು ಸಚಿವ ಸಂಪುಟದಿಂದ ಕೈಬಿಡಲಾಗಿದೆ. ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವ ಮನೋ ತಂಗರಾಜ್, ಪ್ರವಾಸೋದ್ಯಮ ಸಚಿವ ಕೆ ರಾಮಚಂದ್ರನ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಅನಿವಾಸಿ ತಮಿಳರ ಕಲ್ಯಾಣ ಸಚಿವ ಗಿಂಗಿ ಕೆಎಸ್ ಮಸ್ತಾನ್ ಅವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT