ಸುಪ್ರೀಂ ಕೋರ್ಟ್ online desk
ದೇಶ

ಸುಪ್ರೀಂ ಕೋರ್ಟ್ ನೆರವು: ಶುಲ್ಕ ಪಾವತಿಸಲು ಸಾಧ್ಯವಾಗದ ದಲಿತ ವಿದ್ಯಾರ್ಥಿಗೆ ಐಐಟಿ ಪ್ರವೇಶ

ಅತುಲ್ ಕುಮಾರ್ ಗೆ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಬಿಟೆಕ್ ಕೋರ್ಸ್‌ಗೆ ಪ್ರವೇಶ ನೀಡುವುದಕ್ಕೆ ಐಐಟಿ ಧನ್‌ಬಾದ್‌ಗೆ ಸೂಚನೆ ನೀಡಲು ಉನ್ನತ ನ್ಯಾಯಾಲಯ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿದೆ.

ನವದೆಹಲಿ: ಐಐಟಿ ಧನ್ಬಾದ್ ನಲ್ಲಿ ಶುಲ್ಕ ಪಾವತಿಸಲು ಹಣವಿಲ್ಲದೇ ಪ್ರವೇಶ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಎದುರಿಸುತ್ತಿದ್ದ ದಲಿತ ಯುವಕನ ನೆರವಿಗೆ ಸುಪ್ರೀಂ ಕೋರ್ಟ್ ಧಾವಿಸಿದೆ.

ಸಂಸ್ಥೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಬಿಟೆಕ್ ಕೋರ್ಸ್ ಗೆ ಆತನಿಗೆ ಪ್ರವೇಶ ಕಲ್ಪಿಸುವುದಕ್ಕೆ ಸೂಚನೆ ನೀಡಿದ್ದು, ಇಂತಹ ಯುವ ಪ್ರತಿಭಾನ್ವಿತ ಯುವಕರು ಬಿಟ್ಟು ಹೋಗುವುದಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ನ್ಯಾ.ಡಿವೈ ಚಂದ್ರಚೂಡ್ ಹಾಗೂ ನ್ಯಾ. ಜೆಬಿ ಪರ್ದಿವಾಲ ಹಾಗೂ ನ್ಯಾ. ಮನೋಜ್ ಮಿಶ್ರಾ ಅವರಿದ್ದ ಪೀಠ ಹೇಳಿದೆ.

ಅತುಲ್ ಕುಮಾರ್ ಗೆ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಬಿಟೆಕ್ ಕೋರ್ಸ್‌ಗೆ ಪ್ರವೇಶ ನೀಡುವುದಕ್ಕೆ ಐಐಟಿ ಧನ್‌ಬಾದ್‌ಗೆ ಸೂಚನೆ ನೀಡಲು ಉನ್ನತ ನ್ಯಾಯಾಲಯ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿದೆ. "ಪ್ರವೇಶವನ್ನು ಪಡೆಯಲು ಎಲ್ಲಾ ಅರ್ಹತೆ ಪಡೆದ ಗುಂಪಿಗೆ ಸೇರಿದ ಅರ್ಜಿದಾರರಂತಹ ಪ್ರತಿಭಾವಂತ ವಿದ್ಯಾರ್ಥಿಯನ್ನು ಬಿಡಬಾರದು ಎಂದು ನಾವು ಭಾವಿಸುತ್ತೇವೆ ಎಂದು ಕೋರ್ಟ್ ಹೇಳಿದೆ.

ಐಐಟಿ ಧನ್‌ಬಾದ್‌ಗೆ ಅಭ್ಯರ್ಥಿಗೆ ಪ್ರವೇಶ ನೀಡುವಂತೆ ನಾವು ನಿರ್ದೇಶಿಸುತ್ತೇವೆ ಮತ್ತು ಶುಲ್ಕವನ್ನು ಪಾವತಿಸಿದರೆ ಅವರಿಗೆ ಪ್ರವೇಶ ನೀಡಲಾಗುತ್ತಿದ್ದ ಅದೇ ಬ್ಯಾಚ್‌ನಲ್ಲಿ ಪ್ರವೇಶ ಕಲ್ಪಿಸಬೇಕು, ”ಎಂದು ಪೀಠ ಆದೇಶದಲ್ಲಿ ಹೇಳಿದೆ. ನ್ಯಾಯದ ಹಿತದೃಷ್ಟಿಯಿಂದ ಯಾವುದೇ ಆದೇಶವನ್ನು ಹೊರಡಿಸಲು ನ್ಯಾಯಾಲಯಕ್ಕೆ ಸಂವಿಧಾನದ 142 ನೇ ವಿಧಿ ಉನ್ನತ ಅಧಿಕಾರವನ್ನು ನೀಡುತ್ತದೆ.

18 ವರ್ಷದ ಅತುಲ್ ಕುಮಾರ್ ಪೋಷಕರು ಜೂನ್ 24 ರೊಳಗೆ ಸ್ವೀಕಾರ ಶುಲ್ಕವಾಗಿ ರೂ 17,500 ಠೇವಣಿ ಮಾಡಲು ವಿಫಲರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT