ಸುಪ್ರೀಂ ಕೋರ್ಟ್ online desk
ದೇಶ

ಸುಪ್ರೀಂ ಕೋರ್ಟ್ ನೆರವು: ಶುಲ್ಕ ಪಾವತಿಸಲು ಸಾಧ್ಯವಾಗದ ದಲಿತ ವಿದ್ಯಾರ್ಥಿಗೆ ಐಐಟಿ ಪ್ರವೇಶ

ಅತುಲ್ ಕುಮಾರ್ ಗೆ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಬಿಟೆಕ್ ಕೋರ್ಸ್‌ಗೆ ಪ್ರವೇಶ ನೀಡುವುದಕ್ಕೆ ಐಐಟಿ ಧನ್‌ಬಾದ್‌ಗೆ ಸೂಚನೆ ನೀಡಲು ಉನ್ನತ ನ್ಯಾಯಾಲಯ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿದೆ.

ನವದೆಹಲಿ: ಐಐಟಿ ಧನ್ಬಾದ್ ನಲ್ಲಿ ಶುಲ್ಕ ಪಾವತಿಸಲು ಹಣವಿಲ್ಲದೇ ಪ್ರವೇಶ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಎದುರಿಸುತ್ತಿದ್ದ ದಲಿತ ಯುವಕನ ನೆರವಿಗೆ ಸುಪ್ರೀಂ ಕೋರ್ಟ್ ಧಾವಿಸಿದೆ.

ಸಂಸ್ಥೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಬಿಟೆಕ್ ಕೋರ್ಸ್ ಗೆ ಆತನಿಗೆ ಪ್ರವೇಶ ಕಲ್ಪಿಸುವುದಕ್ಕೆ ಸೂಚನೆ ನೀಡಿದ್ದು, ಇಂತಹ ಯುವ ಪ್ರತಿಭಾನ್ವಿತ ಯುವಕರು ಬಿಟ್ಟು ಹೋಗುವುದಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ನ್ಯಾ.ಡಿವೈ ಚಂದ್ರಚೂಡ್ ಹಾಗೂ ನ್ಯಾ. ಜೆಬಿ ಪರ್ದಿವಾಲ ಹಾಗೂ ನ್ಯಾ. ಮನೋಜ್ ಮಿಶ್ರಾ ಅವರಿದ್ದ ಪೀಠ ಹೇಳಿದೆ.

ಅತುಲ್ ಕುಮಾರ್ ಗೆ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಬಿಟೆಕ್ ಕೋರ್ಸ್‌ಗೆ ಪ್ರವೇಶ ನೀಡುವುದಕ್ಕೆ ಐಐಟಿ ಧನ್‌ಬಾದ್‌ಗೆ ಸೂಚನೆ ನೀಡಲು ಉನ್ನತ ನ್ಯಾಯಾಲಯ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿದೆ. "ಪ್ರವೇಶವನ್ನು ಪಡೆಯಲು ಎಲ್ಲಾ ಅರ್ಹತೆ ಪಡೆದ ಗುಂಪಿಗೆ ಸೇರಿದ ಅರ್ಜಿದಾರರಂತಹ ಪ್ರತಿಭಾವಂತ ವಿದ್ಯಾರ್ಥಿಯನ್ನು ಬಿಡಬಾರದು ಎಂದು ನಾವು ಭಾವಿಸುತ್ತೇವೆ ಎಂದು ಕೋರ್ಟ್ ಹೇಳಿದೆ.

ಐಐಟಿ ಧನ್‌ಬಾದ್‌ಗೆ ಅಭ್ಯರ್ಥಿಗೆ ಪ್ರವೇಶ ನೀಡುವಂತೆ ನಾವು ನಿರ್ದೇಶಿಸುತ್ತೇವೆ ಮತ್ತು ಶುಲ್ಕವನ್ನು ಪಾವತಿಸಿದರೆ ಅವರಿಗೆ ಪ್ರವೇಶ ನೀಡಲಾಗುತ್ತಿದ್ದ ಅದೇ ಬ್ಯಾಚ್‌ನಲ್ಲಿ ಪ್ರವೇಶ ಕಲ್ಪಿಸಬೇಕು, ”ಎಂದು ಪೀಠ ಆದೇಶದಲ್ಲಿ ಹೇಳಿದೆ. ನ್ಯಾಯದ ಹಿತದೃಷ್ಟಿಯಿಂದ ಯಾವುದೇ ಆದೇಶವನ್ನು ಹೊರಡಿಸಲು ನ್ಯಾಯಾಲಯಕ್ಕೆ ಸಂವಿಧಾನದ 142 ನೇ ವಿಧಿ ಉನ್ನತ ಅಧಿಕಾರವನ್ನು ನೀಡುತ್ತದೆ.

18 ವರ್ಷದ ಅತುಲ್ ಕುಮಾರ್ ಪೋಷಕರು ಜೂನ್ 24 ರೊಳಗೆ ಸ್ವೀಕಾರ ಶುಲ್ಕವಾಗಿ ರೂ 17,500 ಠೇವಣಿ ಮಾಡಲು ವಿಫಲರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

ಕಳ್ಳಬಟ್ಟಿ ಸಾರಾಯಿ–ಸೇಂದಿ ದಂಧೆಕೋರರು ಗಡಿಪಾರು: ಸಚಿವ ತಿಮ್ಮಾಪುರ ಸೂಚನೆ

SCROLL FOR NEXT