ಸಾಂದರ್ಭಿಕ ಚಿತ್ರ 
ದೇಶ

ದೇಶಿ ಹಸುಗಳನ್ನು 'ರಾಜ್ಯಮಾತಾ-ಗೋಮಾತೆ' ಎಂದು ಮಹಾರಾಷ್ಟ್ರ ಸರ್ಕಾರ ಘೋಷಣೆ

ವೇದಗಳ ಕಾಲದಿಂದಲೂ ಹಸುಗಳು ಹೊಂದಿರುವ ಪ್ರಾಮುಖ್ಯತೆಯನ್ನು ಪರಿಗಣಿಸಿ ಅವುಗಳನ್ನು 'ರಾಜ್ಯಮಾತಾ-ಗೋಮಾತೆ' ಎಂದು ಘೋಷಿಸಿರುವುದಾಗಿ ಸರ್ಕಾರದ ಅಧಿಕೃತ ಅಧಿಸೂಚನೆ ತಿಳಿಸಿದೆ.

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಸೋಮವಾರ ದೇಸಿ(ಸ್ಥಳೀಯ) ಹಸುಗಳನ್ನು 'ರಾಜ್ಯಮಾತಾ-ಗೋಮಾತೆ' ಎಂದು ಘೋಷಿಸಿದೆ.

ವೇದಗಳ ಕಾಲದಿಂದಲೂ ಹಸುಗಳು ಹೊಂದಿರುವ ಪ್ರಾಮುಖ್ಯತೆಯನ್ನು ಪರಿಗಣಿಸಿ ಅವುಗಳನ್ನು 'ರಾಜ್ಯಮಾತಾ-ಗೋಮಾತೆ' ಎಂದು ಘೋಷಿಸಿರುವುದಾಗಿ ಸರ್ಕಾರದ ಅಧಿಕೃತ ಅಧಿಸೂಚನೆ ತಿಳಿಸಿದೆ.

ಮಾನವನ ಪೋಷಣೆಯಲ್ಲಿ ದೇಶಿ ಹಸುವಿನ ಹಾಲಿನ ಪ್ರಾಮುಖ್ಯತೆ, ಆಯುರ್ವೇದ ಮತ್ತು ಪಂಚಗವ್ಯ ಚಿಕಿತ್ಸೆ ಮತ್ತು ಸಾವಯವ ಕೃಷಿಯಲ್ಲಿ ಹಸುವಿನ ಗೊಬ್ಬರದ ಬಳಕೆ ಇತರ ಅಂಶಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಕೃಷಿ, ಹೈನುಗಾರಿಕೆ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಹೊರಡಿಸಿದ ಸರ್ಕಾರದ ನಿರ್ಣಯ ತಿಳಿಸಿದೆ.

"ದೇಶಿ ಹಸುಗಳು ರೈತರಿಗೆ ವರದಾನವಾಗಿದೆ. ಆದ್ದರಿಂದ ಮಹಾರಾಷ್ಟ್ರ ಸರ್ಕಾರವು ಅವುಗಳಿಗೆ 'ರಾಜ್ಯ ಮಾತಾ' ಸ್ಥಾನಮಾನ ನೀಡಲು ನಿರ್ಧರಿಸಿದೆ. ಹೆಚ್ಚುವರಿಯಾಗಿ, ಗೋಶಾಲೆಗಳಲ್ಲಿ ದೇಶಿ ಹಸುಗಳನ್ನು ಸಾಕಲು ನೆರವು ನೀಡಲಾಗುವುದು ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಚೇರಿಯ ಹೇಳಿಕೆಯ ಪ್ರಕಾರ, ರಾಜ್ಯ ಸಚಿವ ಸಂಪುಟವು ದೇಶಿ ಹಸುಗಳನ್ನು ಸಾಕಲು ದಿನಕ್ಕೆ 50 ರೂಪಾಯಿ ಸಬ್ಸಿಡಿ ಯೋಜನೆಗೆ ಅನುಮೋದನೆ ನೀಡಿದೆ.

“ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಕಡಿಮೆ ಆದಾಯದಿಂದ ಗೋಶಾಲೆಗಳು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿವೆ. ಅವುಗಳನ್ನು ಬಲಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದೆ ಮತ್ತು ಈ ಯೋಜನೆಯನ್ನು ಮಹಾರಾಷ್ಟ್ರ ಗೋಸೇವಾ ಆಯೋಗವು ಆನ್‌ಲೈನ್‌ ಮೂಲಕ ಕಾರ್ಯಗತಗೊಳಿಸಲಿದೆ” ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT