ಸಾಂದರ್ಭಿಕ ಚಿತ್ರ 
ದೇಶ

ದೇಶಿ ಹಸುಗಳನ್ನು 'ರಾಜ್ಯಮಾತಾ-ಗೋಮಾತೆ' ಎಂದು ಮಹಾರಾಷ್ಟ್ರ ಸರ್ಕಾರ ಘೋಷಣೆ

ವೇದಗಳ ಕಾಲದಿಂದಲೂ ಹಸುಗಳು ಹೊಂದಿರುವ ಪ್ರಾಮುಖ್ಯತೆಯನ್ನು ಪರಿಗಣಿಸಿ ಅವುಗಳನ್ನು 'ರಾಜ್ಯಮಾತಾ-ಗೋಮಾತೆ' ಎಂದು ಘೋಷಿಸಿರುವುದಾಗಿ ಸರ್ಕಾರದ ಅಧಿಕೃತ ಅಧಿಸೂಚನೆ ತಿಳಿಸಿದೆ.

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಸೋಮವಾರ ದೇಸಿ(ಸ್ಥಳೀಯ) ಹಸುಗಳನ್ನು 'ರಾಜ್ಯಮಾತಾ-ಗೋಮಾತೆ' ಎಂದು ಘೋಷಿಸಿದೆ.

ವೇದಗಳ ಕಾಲದಿಂದಲೂ ಹಸುಗಳು ಹೊಂದಿರುವ ಪ್ರಾಮುಖ್ಯತೆಯನ್ನು ಪರಿಗಣಿಸಿ ಅವುಗಳನ್ನು 'ರಾಜ್ಯಮಾತಾ-ಗೋಮಾತೆ' ಎಂದು ಘೋಷಿಸಿರುವುದಾಗಿ ಸರ್ಕಾರದ ಅಧಿಕೃತ ಅಧಿಸೂಚನೆ ತಿಳಿಸಿದೆ.

ಮಾನವನ ಪೋಷಣೆಯಲ್ಲಿ ದೇಶಿ ಹಸುವಿನ ಹಾಲಿನ ಪ್ರಾಮುಖ್ಯತೆ, ಆಯುರ್ವೇದ ಮತ್ತು ಪಂಚಗವ್ಯ ಚಿಕಿತ್ಸೆ ಮತ್ತು ಸಾವಯವ ಕೃಷಿಯಲ್ಲಿ ಹಸುವಿನ ಗೊಬ್ಬರದ ಬಳಕೆ ಇತರ ಅಂಶಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಕೃಷಿ, ಹೈನುಗಾರಿಕೆ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಹೊರಡಿಸಿದ ಸರ್ಕಾರದ ನಿರ್ಣಯ ತಿಳಿಸಿದೆ.

"ದೇಶಿ ಹಸುಗಳು ರೈತರಿಗೆ ವರದಾನವಾಗಿದೆ. ಆದ್ದರಿಂದ ಮಹಾರಾಷ್ಟ್ರ ಸರ್ಕಾರವು ಅವುಗಳಿಗೆ 'ರಾಜ್ಯ ಮಾತಾ' ಸ್ಥಾನಮಾನ ನೀಡಲು ನಿರ್ಧರಿಸಿದೆ. ಹೆಚ್ಚುವರಿಯಾಗಿ, ಗೋಶಾಲೆಗಳಲ್ಲಿ ದೇಶಿ ಹಸುಗಳನ್ನು ಸಾಕಲು ನೆರವು ನೀಡಲಾಗುವುದು ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಚೇರಿಯ ಹೇಳಿಕೆಯ ಪ್ರಕಾರ, ರಾಜ್ಯ ಸಚಿವ ಸಂಪುಟವು ದೇಶಿ ಹಸುಗಳನ್ನು ಸಾಕಲು ದಿನಕ್ಕೆ 50 ರೂಪಾಯಿ ಸಬ್ಸಿಡಿ ಯೋಜನೆಗೆ ಅನುಮೋದನೆ ನೀಡಿದೆ.

“ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಕಡಿಮೆ ಆದಾಯದಿಂದ ಗೋಶಾಲೆಗಳು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿವೆ. ಅವುಗಳನ್ನು ಬಲಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದೆ ಮತ್ತು ಈ ಯೋಜನೆಯನ್ನು ಮಹಾರಾಷ್ಟ್ರ ಗೋಸೇವಾ ಆಯೋಗವು ಆನ್‌ಲೈನ್‌ ಮೂಲಕ ಕಾರ್ಯಗತಗೊಳಿಸಲಿದೆ” ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್