ಹಳಿ ತಪ್ಪಿದ ಗೂಡ್ಸ್ ರೈಲು 
ದೇಶ

ಜಾರ್ಖಂಡ್: ಗೂಡ್ಸ್​ ರೈಲುಗಳು ಮುಖಾಮುಖಿ ಡಿಕ್ಕಿ; ಎಂಜಿನ್​ಗಳು ನಜ್ಜುಗುಜ್ಜು, ಇಬ್ಬರು ಸಾವು

ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಆದ್ರೆ ಈ ಅಪಘಾತದಲ್ಲಿ ಕಾರ್ಮಿಕನೊಬ್ಬ ಕಾರ್ಮಿಕ ಸಿಕ್ಕಿಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಇದೆ.

ಜಾರ್ಖಂಡ್: ಜಾರ್ಖಂಡ್​ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಸಾಹಿಬ್​ಗಂಜ್​ನ ಬರ್ಹೆತ್​ನ ಎನ್‌ಟಿಪಿಸಿ ಗೇಟ್ ಬಳಿ ಎರಡು ಸರಕು ರೈಲುಗಳ ನಡುವೆ ಭಾರಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಆದ್ರೆ ಈ ಅಪಘಾತದಲ್ಲಿ ಕಾರ್ಮಿಕನೊಬ್ಬ ಕಾರ್ಮಿಕ ಸಿಕ್ಕಿಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಇದೆ.

ಈ ಬಗ್ಗೆ ಮಾಹಿತಿ ನೀಡಿದ ಸಾಹಿಬ್‌ಗಂಜ್ ಪ್ರಧಾನ ಕಚೇರಿಯಿಂದ ಆಗಮಿಸಿದ ಅಗ್ನಿಶಾಮಕ ದಳದ ಕೆಲಸಗಾರ ರವಿ, ಈ ಘಟನೆ ಬೆಳಗಿನ ಜಾವ 3:30ಕ್ಕೆ ಸಂಭವಿಸಿದೆ. ಹಳಿ ಮೇಲೆ ಸರಕು ರೈಲು ನಿಂತಿತ್ತು. ಈ ಸಮಯದಲ್ಲಿ ಇನ್ನೊಂದು ಬದಿಯಿಂದ ಬರುತ್ತಿದ್ದ ಸರಕು ರೈಲು ಜೋರಾಗಿ ಡಿಕ್ಕಿ ಹೊಡೆದಿದೆ.

ಪರಿಣಾಮ ಎಂಜಿನ್ ಮತ್ತು ಕಲ್ಲಿದ್ದಲು ತುಂಬಿದ ಬೋಗಿಗೆ ಬೆಂಕಿ ಹೊತ್ತಿಕೊಂಡಿತು. ಬೆಂಕಿಯನ್ನು ನಂದಿಸುವ ಕಾರ್ಯ ಮುಂದುವರೆದಿದೆ. ಈ ಅಪಘಾತದಲ್ಲಿ ಎರಡು ರೈಲು ಎಂಜಿನ್‌ಗಳು ಹಳಿತಪ್ಪಿ ಸಂಪೂರ್ಣವಾಗಿ ಹಾನಿಗೊಳಗಾಗಿವೆ ಎಂದು ಹೇಳಿದರು. ಎಂಜಿನ್‌ನಲ್ಲಿ ಏಳು ಜನರಿದ್ದರು, ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಆದ್ರೆ ಕೆಲಸಗಾರನೊಬ್ಬ ಎಂಜಿನ್‌ನಲ್ಲಿ ಸಿಲುಕಿಕೊಂಡಿದ್ದಾರೆ.

ಅವರನ್ನು ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ. ಗಾಯಾಳುಗಳನ್ನು ಬರ್ಹತ್ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ