ಗೌರವ್ ಗೊಗೊಯ್ 
ದೇಶ

ದುರ್ಬಲ, ಅವಮಾನ, ವಿಭಜನೆ, ಹಕ್ಕು ನಿರಾಕರಣೆ: ವಕ್ಫ್ ಮಸೂದೆ ವಿರುದ್ಧ ಕಾಂಗ್ರೆಸ್‌ '4D' ದಾಳಿ

ಸರ್ಕಾರವು "ಅಲ್ಪಸಂಖ್ಯಾತರನ್ನು ಅವಮಾನಿಸುತ್ತಿದೆ ಮತ್ತು ಅವರ ಹಕ್ಕುಗಳನ್ನು ಕಸಿದುಕೊಳ್ಳಲು" ಯತ್ನಿಸುತ್ತಿದೆ ಎಂದು ಗೊಗೊಯ್ ಗಂಭೀರ ಆರೋಪ ಮಾಡಿದರು.

ನವದೆಹಲಿ: ಪ್ರತಿಪಕ್ಷಗಳ ತೀವ್ರ ಗದ್ದಲ ಹಾಗೂ ವಿರೋಧದ ನಡುವೆಯೂ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬುಧವಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ.

ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸರ್ಕಾರವು "ಅಲ್ಪಸಂಖ್ಯಾತರನ್ನು ಅವಮಾನಿಸುತ್ತಿದೆ ಮತ್ತು ಅವರ ಹಕ್ಕುಗಳನ್ನು ಕಸಿದುಕೊಳ್ಳಲು" ಯತ್ನಿಸುತ್ತಿದೆ ಎಂದು ಗೊಗೊಯ್ ಗಂಭೀರ ಆರೋಪ ಮಾಡಿದರು. ಈ ಮಸೂದೆಯು ಸಂವಿಧಾನವನ್ನು ದುರ್ಬಲಗೊಳಿಸುವ, ಅಲ್ಪಸಂಖ್ಯಾತ ಸಮುದಾಯವನ್ನು ಅವಮಾನಿಸುವ, ಭಾರತೀಯ ಸಮಾಜವನ್ನು ವಿಭಜಿಸುವ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುವ ಗುರಿ ಹೊಂದಿದೆ. ಇದು "ಸಂವಿಧಾನದ ಮೇಲೆ 4D ದಾಳಿ" ಎಂದು ವಾಗ್ದಾಳಿ ನಡೆಸಿದರು.

ಸರ್ಕಾರದ ಈ ಉದ್ದೇಶಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಗೊಗೊಯ್, "ಇಂದು ಅವರು ಒಂದು ನಿರ್ದಿಷ್ಟ ಸಮುದಾಯದ ಭೂಮಿಯ ಮೇಲೆ ಕಣ್ಣಿಟ್ಟಿದ್ದಾರೆ; ನಾಳೆ, ಅವರು ಸಮಾಜದ ಇತರ ಅಲ್ಪಸಂಖ್ಯಾತರ ಭೂಮಿಯನ್ನು ಗುರಿಯಾಗಿಸಿಕೊಳ್ಳುತ್ತಾರೆ" ಎಂದು ಟೀಕಿಸಿದರು.

ಮಸೂದೆ ಕುರಿತ ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಪರಿಗಣಿಸಿ ಜಂಟಿ ಸಂಸದೀಯ ಸಮಿತಿಯಲ್ಲಿ(ಜೆಪಿಸಿ) ಚರ್ಚೆ ನಡೆದಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರ ಸಮರ್ಥನೆಯನ್ನು ತಿರಸ್ಕರಿಸಿದ ಗೊಗೊಯ್ “ ನಿಮಯದ ಪ್ರಕಾರ ಚರ್ಚೆ ನಡೆದಿಲ್ಲ” ಎಂದು ಹೇಳಿದರು.

ವಿರೋಧ ಪಕ್ಷಗಳು ಸೂಚಿಸಿದ ಒಂದೇ ಒಂದು ತಿದ್ದುಪಡಿಯನ್ನು ಅಂಗೀಕರಿಸಿಲ್ಲ. ಅಭಿಪ್ರಾಯ ಸಂಗ್ರಹಿಸುವಾಗ ವಕ್ಫ್‌ ಬಗ್ಗೆ ಮಾಹಿತಿ ಇಲ್ಲದವರನ್ನು ಜೆಪಿಸಿಗೆ ಆಹ್ವಾನಿಸಲಾಗಿದೆ ಎಂದರು.

ಒಬ್ಬ ವ್ಯಕ್ತಿ ಕನಿಷ್ಠ ಐದು ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಪಾಲಿಸಿದ್ದರೆ ಮಾತ್ರ ಆಸ್ತಿಯನ್ನು ವಕ್ಫ್‌ ಮಾಡಲು ಅವರು ಅರ್ಹರು ಎಂಬ ಸಚಿವ ರಿಜಿಜು ಹೇಳಿಕೆಯನ್ನು ಪ್ರಶ್ನಿಸಿದ ಗೊಗೊಯ್, “ಇತರ ಧರ್ಮಗಳ ಜನರಿಗೆ ನೀವು ಐದು ವರ್ಷಗಳಿಂದ ಧರ್ಮ ಪಾಲಿಸುತ್ತಿದ್ದೀರಾ? ಎಂದು ಸರ್ಕಾರ ಪ್ರಮಾಣ ಪತ್ರ ಕೇಳುತ್ತದಯೇ? ಹೀಗಿರುವಾಗ ಈ ಮಸೂದೆಯಲ್ಲಿ ಮಾತ್ರ ಈ ಮಾನದಂಡವನ್ನು ಅಳವಡಿಸಲಾಗಿದೆ. ಸರ್ಕಾರ ಧರ್ಮದ ವಿಚಾರದಲ್ಲಿ ಏಕೆ ಹಸ್ತಕ್ಷೇಪ ಮಾಡುತ್ತಿದೆ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

SCROLL FOR NEXT