ಕುನಾಲ್ ಕಾಮ್ರಾ-ಏಕನಾಥ್ ಶಿಂಧೆ. 
ದೇಶ

ಏಕನಾಥ್ ಶಿಂದೆ ಬಗ್ಗೆ ಅವಹೇಳನ: ಕಾಮಿಡಿಯನ್​ ಕುನಾಲ್ ಕಾಮ್ರಾಗೆ ಪೊಲೀಸರಿಂದ 3ನೇ ಸಮನ್ಸ್ ಜಾರಿ

ಕುನಾಲ್ ಕಾಮ್ರಾ ಅವರು ಮುಂಬೈನ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ಕಾರ್ಯಕ್ರಮ ನೀಡುವಾಗ ಮಹಾರಾಷ್ಟ್ರದ ರಾಜಕೀಯ ವಿಭಜನೆಯ ಬಗ್ಗೆ ಮಾತನಾಡಿದ್ದರು.

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಏಪ್ರಿಲ್ 5 ರಂದು ಹಾಜರಾಗುವಂತೆ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ 3ನೇ ಬಾರಿಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

ಮಂಗಳವಾರ ಸಮನ್ಸ್ ಜಾರಿ ಮಾಡಲಾಗಿದ್ದು, ಕಾಮ್ರಾ (36) ಅವರನ್ನು ಖಾರ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ,

ಪೊಲೀಸರು ಅವರಿಗೆ ಈ ಹಿಂದೆ ಎರಡು ಬಾರಿ ಸಮನ್ಸ್ ಜಾರಿ ಮಾಡಿದ್ದರು ಆದರೆ, ತನಿಖೆಗೆ ಹಾಜರಾಗದೆ ತನಿಖೆಗ ಸಹಕರಿಸಿದ್ದರು.

ಕುನಾಲ್ ಕಾಮ್ರಾ ಅವರು ಮುಂಬೈನ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ಕಾರ್ಯಕ್ರಮ ನೀಡುವಾಗ ಮಹಾರಾಷ್ಟ್ರದ ರಾಜಕೀಯ ವಿಭಜನೆಯ ಬಗ್ಗೆ ಮಾತನಾಡಿದ್ದರು.

ಉಲ್ಲೇಖಿಸಿ ದಿಲ್ ತೋ ಪಾಗಲ್ ಹೈ ಹಾಡನ್ನು ಅಣಕಿಸುವ ರೀತಿಯಲ್ಲಿ ರಾಜಕೀಯ ಪಕ್ಷಗಳನ್ನು ವಿಲೀನಗೊಳಿಸಿ ಹಾಡಿದ್ದರು. ಆದರೆ, ಕಾಮ್ರಾ ಶಿಂಧೆ ಅವರ ಹೆಸರನ್ನು ಸ್ಪಷ್ಟವಾಗಿ ಎಲ್ಲೂ ಉಲ್ಲೇಖಿಸರಲಿಲ್ಲ.

ಏಕನಾಥ್‌ ಶಿಂಧೆ - ಉದ್ದವ್ ಠಾಕ್ರೆ ನಡುವಿನ ರಾಜಕೀಯ ಉಲ್ಲೇಖಿಸುತ್ತಾ ಮೊದಲು ಶಿವಸೇನಾ ಬಿಜೆಪಿಯಿಂದ ಹೊರಬಂದಿತು, ನಂತರ ಶಿವಸೇನಾ ಶಿವಸೇನಾದಿಂದಲೇ ಹೊರಬಂದಿತು. ಎನ್‌ಸಿಪಿಯಿಂದ ಎನ್‌ಸಿಪಿ ಹೊರಬಂದಿತು. ಇವರೆಲ್ಲಾ ಒಂದು ಮತದಾರನಿಗೆ 9 ಬಟನ್‌ಗಳನ್ನು ನೀಡಿದ್ದಾರೆ. ಥಾಣೆಯು ರಾಜಕೀಯ ಭದ್ರಕೋಟೆಯಾಗಿದ್ದು, ಗದ್ದಾರ್‌ (ದ್ರೋಹಿ) ಆಳ್ವಿಕೆ ಎಂದು ಪರೋಕ್ಷವಾಗಿ ಹಾಡು ಹೇಳುತ್ತಾ ಟೀಕಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಛತ್ತೀಸ್‌ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

SCROLL FOR NEXT