ಕಿರಣ್ ರಿಜಿಜು- ಗೌರವ್ ಗೊಗೋಯಿ online desk
ದೇಶ

ಬಿಜೆಪಿಯವರು ಕ್ಷಮಾದಾನ ಪತ್ರ ಬರೆಯುತ್ತಿದ್ದಾಗ ಮುಸ್ಲಿಮರು ಬ್ರಿಟೀಷರ ವಿರುದ್ಧ ಹೋರಾಡುತ್ತಿದ್ದರು: ವಕ್ಫ್ ಮಸೂದೆ ವಿರುದ್ಧ ಗೌರವ್ ಗೊಗೋಯಿ ಗುಡುಗು!

ನೀವು ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆಯುತ್ತಿದ್ದಾಗ, ನೀವು ಕ್ವಿಟ್ ಇಂಡಿಯಾ ಚಳವಳಿಯನ್ನು ಬೆಂಬಲಿಸದಿದ್ದಾಗ, ಆ ಸಮುದಾಯವು ಕ್ವಿಟ್ ಇಂಡಿಯಾ ಚಳವಳಿಯನ್ನು ಬೆಂಬಲಿಸಿತ್ತು ಎಂದು ಗೊಗೋಯ್ ಹೇಳಿದ್ದಾರೆ.

ನವದೆಹಲಿ: ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದು, ಕಾಂಗ್ರೆಸ್ ತಿದ್ದುಪಡಿ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ನ ಉಪನಾಯಕ ಗೌರವ್ ಗೊಗೋಯ್ ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಮಾತನಾಡಿದ್ದು, ನೀವು (ಸರ್ಕಾರ) ಯಾವ ಸಂದೇಶವನ್ನು ನೀಡಲು ಬಯಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ

"ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಮುದಾಯ, 1857 ರಲ್ಲಿ ಮಂಗಲ್ ಪಾಂಡೆ ಅವರೊಂದಿಗೆ ತನ್ನ ಪ್ರಾಣವನ್ನು ತ್ಯಾಗ ಮಾಡಿದ ಸಮುದಾಯದ ಗೌರವ ಘನತೆಗಳಿಗೆ ಸರ್ಕಾರ ಮಸಿ ಬಳಿಯಬೇಕೆಂದಿದ್ದೀರಾ? ಎಂದು ಗೊಗೋಯ್ ಪ್ರಶ್ನಿಸಿದ್ದಾರೆ.

ನೀವು ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆಯುತ್ತಿದ್ದಾಗ, ನೀವು ಕ್ವಿಟ್ ಇಂಡಿಯಾ ಚಳವಳಿಯನ್ನು ಬೆಂಬಲಿಸದಿದ್ದಾಗ, ಆ ಸಮುದಾಯವು ಕ್ವಿಟ್ ಇಂಡಿಯಾ ಚಳವಳಿಯನ್ನು ಬೆಂಬಲಿಸಿತು. 1924 ರಲ್ಲಿ ಜಿನ್ನಾ ಅವರ ದ್ವಿರಾಷ್ಟ್ರ ಸಿದ್ಧಾಂತವನ್ನು ಸಂಪೂರ್ಣವಾಗಿ ತಿರಸ್ಕರಿಸಿದ ಸಮುದಾಯದ ಪ್ರತಿಷ್ಠೆಯನ್ನು ನೀವು ಹಾಳು ಮಾಡಲು ಬಯಸುತ್ತೀರಿ. ಇದು ನಿಮ್ಮ ಒಡೆದು ಆಳುವ ನೀತಿ. ನಮಗೆ ರಾಷ್ಟ್ರೀಯತೆ ಎಂಬುದು ನಮಗೆ ಒಗ್ಗಟ್ಟು ಎಂದು ಗೊಗೋಯ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯದುವೀರ್ ಒಡೆಯರ್ ರಿಂದ ಬನ್ನಿ ಮರಕ್ಕೆ ಶಮಿ ಪೂಜೆ: ಅರಮನೆ ದಸರಾ ಮುಕ್ತಾಯ

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: NCRB ವರದಿ

1st Test: ಇತಿಹಾಸ ಬರೆದ Jasprit Bumrah, ಕನ್ನಡಿಗ Javagal Srinath ಹಳೇ ದಾಖಲೆ ಕೊನೆಗೂ ಪತನ!

1st Test: Siraj, Bumrah ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ West Indies, ಮೊದಲ ಇನ್ನಿಂಗ್ಸ್ 162 ರನ್ ಗೆ ಆಲೌಟ್!

ಸ್ವದೇಶಿ-ಸ್ವಾವಲಂಬನೆಗೆ ಪರ್ಯಾಯವಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

SCROLL FOR NEXT