ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ ಸಚಿವ ಕಿರಣ್ ರಿಜಿಜು  
ದೇಶ

ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ: ಸಚಿವ ಕಿರಣ್ ರಿಜಿಜು ಹೇಳಿದ್ದೇನು?

ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಿ ಮಾತನಾಡಿದ ಸಚಿವರು, ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ನಾವು ರಾಜ್ಯ ಸರ್ಕಾರಗಳು, ಅಲ್ಪಸಂಖ್ಯಾತ ಆಯೋಗಗಳು ಮತ್ತು ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಿದ್ದೇವೆ ಎಂದು ಹೇಳಿದರು.

ನವದೆಹಲಿ: ತೀವ್ರ ವಿರೋಧದ ನಡುವೆ ಲೋಕಸಭೆಯಲ್ಲಿ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆ-2025ನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ರಾಜ್ಯಸಭೆಯಲ್ಲಿ ಮಂಡಿಸಿದರು.

ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಿ ಮಾತನಾಡಿದ ರಿಜಿಜು, ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ನಾವು ರಾಜ್ಯ ಸರ್ಕಾರಗಳು, ಅಲ್ಪಸಂಖ್ಯಾತ ಆಯೋಗಗಳು ಮತ್ತು ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಿದ್ದೇವೆ.

ರಾಜ್ಯಸಭೆ ಮತ್ತು ಲೋಕಸಭೆ ಎರಡರ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಂಸದೀಯ ಸಮಿತಿ (JPC)ಯನ್ನು ರಚಿಸಲಾಯಿತು, ವ್ಯಾಪಕ ಚರ್ಚೆಗಳ ನಂತರ ಮಸೂದೆಯನ್ನು ನಿನ್ನೆ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು ಎಂದರು. ಭಾರತದಲ್ಲಿ ಅಪಾರ ಪ್ರಮಾಣದ ವಕ್ಫ್ ಆಸ್ತಿಗಳನ್ನು ಸಚಿವರು ಎತ್ತಿ ತೋರಿಸಿದರು.

ಇಂದು ದೇಶದಲ್ಲಿ 8.72 ಲಕ್ಷ ವಕ್ಫ್ ಆಸ್ತಿಗಳಿವೆ. 2006 ರಲ್ಲಿ, ಸಾಚಾರ್ ಸಮಿತಿಯು 4.9 ಲಕ್ಷ ವಕ್ಫ್ ಆಸ್ತಿಗಳಿಂದ 12,000 ಕೋಟಿ ರೂಪಾಯಿ ಆದಾಯ ಬರುತ್ತದೆ ಎಂದು ಆದಾಯವನ್ನು ಅಂದಾಜಿಸಿದೆ. ಈ ಆಸ್ತಿಗಳಿಂದ ಅಪಾರ ಪ್ರಮಾಣದ ಆದಾಯ ಬರುತ್ತದೆ ಎಂದರು.

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ವಕ್ಫ್ ತಿದ್ದುಪಡಿ ಮಸೂದೆಯನ್ನು ಬೆಂಬಲಿಸುವಂತೆ ಅವರು ಒತ್ತಾಯಿಸಿದರು. ನಿನ್ನೆ ಲೋಕಸಭೆಯಲ್ಲಿ ಆಡಳಿತಾರೂಢ ಎನ್ ಡಿಎ ಮತ್ತು ವಿರೋಧ ಪಕ್ಷದ ಇಂಡಿಯಾ ಒಕ್ಕೂಟ ನಡುವೆ 12 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಬಿಸಿಬಿಸಿ ಚರ್ಚೆ ನಂತರ ವಕ್ಫ್ (ತಿದ್ದುಪಡಿ) ಮಸೂದೆ, 2025 ನ್ನು ಅಂಗೀಕರಿಸಲಾಯಿತು. ಮಸೂದೆ ಪರವಾಗಿ 288 ಮತ್ತು ವಿರುದ್ಧವಾಗಿ 232 ಮತಗಳು ಚಲಾವಣೆಯಾದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT