ಸಾಂದರ್ಭಿಕ ಚಿತ್ರ 
ದೇಶ

ಮಳೆ ಮತ್ತು ತಾಪಮಾನ ಏರಿಕೆ: ದೇಶಾದ್ಯಂತ ಹವಾಮಾನ ಬದಲಾವಣೆ- IMD ಎಚ್ಚರಿಕೆ

ದೆಹಲಿಯಲ್ಲಿ ತಾಪಮಾನ ಹೆಚ್ಚಾದಂತೆ, ಮುಂದಿನ ದಿನಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಏಪ್ರಿಲ್ 3 ರಿಂದ 5 ರವರೆಗೆ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ದಾಟಬಹುದು.

ನವದೆಹಲಿ: ದೇಶಾದ್ಯಂತ ಹವಾಮಾನದಲ್ಲಿನ ಬದಲಾವಣೆಗಳ ಕುರಿತು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಚಂಡಮಾರುತದ ಪರಿಚಲನೆಯು ಅನೇಕ ರಾಜ್ಯಗಳಲ್ಲಿ ಅತ್ಯಂತ ಹೆಚ್ಚಿನ ತಾಪಮಾನದ ಜೊತೆಗೆ ಮಳೆ ಸಹ ಬರಬಹುದು ಎಂದು ಎಚ್ಚರಿಕೆ ನೀಡಿದೆ.

ಐಎಂಡಿ ಮುನ್ಸೂಚನೆಯ ಪ್ರಕಾರ, ಏಪ್ರಿಲ್ ನಿಂದ ಜೂನ್ ವರೆಗೆ ಭಾರತದಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಮಧ್ಯ, ಪೂರ್ವ ಭಾರತ ಮತ್ತು ವಾಯುವ್ಯ ಬಯಲು ಪ್ರದೇಶಗಳಲ್ಲಿ ಹೆಚ್ಚಿನ ಸಮಯ ಶಾಖದ ಅಲೆಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ತಾಪಮಾನ ಏರಿಕೆ

ದೆಹಲಿಯಲ್ಲಿ ತಾಪಮಾನ ಹೆಚ್ಚಾದಂತೆ, ಮುಂದಿನ ದಿನಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಏಪ್ರಿಲ್ 3 ರಿಂದ 5 ರವರೆಗೆ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ದಾಟಬಹುದು ಎಂದು ಐಎಂಡಿ ಮುನ್ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ ಗರಿಷ್ಠ ತಾಪಮಾನ ಈಗಾಗಲೇ 34.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ತಾಪಮಾನ ಏರಿಕೆ

ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ, ಛತ್ತೀಸ್‌ಗಢ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚಿನ ತಾಪಮಾನ ಮತ್ತು ಶಾಖದ ಅಲೆಗಳು ಬೀಸುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳಾದ ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.

ಏಪ್ರಿಲ್ 4 ರಂದು ಮಳೆ

ಮಧ್ಯ, ದಕ್ಷಿಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ಪಶ್ಚಿಮ ರಾಜ್ಯಗಳಲ್ಲಿ ಹೆಚ್ಚಿನ ತಾಪಮಾನ ಉಂಟಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್ 4 ರವರೆಗೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಏಪ್ರಿಲ್ 4 ರವರೆಗೆ ಮಧ್ಯಪ್ರದೇಶ, ಕರ್ನಾಟಕ, ಕೇರಳ, ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಗಾಳಿಯ ವೇಗ ಗಂಟೆಗೆ 30 ರಿಂದ 60 ಕಿ.ಮೀ. ತಲುಪುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್