ಯಾಸಿನ್ ಮಲಿಕ್(ಸಂಗ್ರಹ ಚಿತ್ರ) 
ದೇಶ

ನಾನು ಭಯೋತ್ಪಾದಕನಲ್ಲ, ನನ್ನೊಂದಿಗೆ 7 ಪ್ರಧಾನಿಗಳು ಮಾತುಕತೆ ನಡೆಸಿದ್ದಾರೆ: ಯಾಸಿನ್ ಮಲಿಕ್

ಕೇಂದ್ರ ಸರ್ಕಾರ ನನ್ನ ಸಂಘಟನೆಯನ್ನು ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಸಂಘಟನೆ ಎಂದು ಪಟ್ಟಿ ಮಾಡಿಲ್ಲ ಎಂದು ಮಲಿಕ್ ಹೇಳಿದರು.

ನವದೆಹಲಿ: ಜೈಲಿನಲ್ಲಿರುವ ಜೆಕೆಎಲ್‌ಎಫ್ ಮುಖ್ಯಸ್ಥ ಯಾಸಿನ್ ಮಲಿಕ್ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ತಾನು "ಒಬ್ಬ ರಾಜಕೀಯ ನಾಯಕ. ಭಯೋತ್ಪಾದಕನಲ್ಲ", ಈ ಹಿಂದೆ ತನ್ನೊಂದಿಗೆ ಏಳು ಪ್ರಧಾನ ಮಂತ್ರಿಗಳು ಮಾತುಕತೆ ನಡೆಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠದ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದ ಮಲಿಕ್, ಸಿಬಿಐ ಅನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದವನ್ನು ಉಲ್ಲೇಖಿಸಿ, ಭಯೋತ್ಪಾದಕ ಹಫೀಜ್ ಸಯೀದ್ ಜೊತೆಗೆ ನನ್ನ ಫೋಟೋಗಳಿವೆ ಮತ್ತು ಅದನ್ನು ಎಲ್ಲಾ ರಾಷ್ಟ್ರೀಯ ಮತ್ತು ಪ್ರಾದೇಶಿಕ ದಿನಪತ್ರಿಕೆಗಳು ಹಾಗೂ ಟಿವಿ ಚಾನೆಲ್‌ಗಳು ವರದಿ ಮಾಡಿವೆ ಎಂದರು.

"ಈ ಹೇಳಿಕೆಯು ನನ್ನ ವಿರುದ್ಧ ಸಾರ್ವಜನಿಕವಾಗಿ ಕೆಟ್ಟ ನಿರೂಪಣೆಯನ್ನು ಸೃಷ್ಟಿಸಿದೆ. ಆದರೆ ಕೇಂದ್ರ ಸರ್ಕಾರ ನನ್ನ ಸಂಘಟನೆಯನ್ನು ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಸಂಘಟನೆ ಎಂದು ಪಟ್ಟಿ ಮಾಡಿಲ್ಲ ಎಂದು ಮಲಿಕ್ ಹೇಳಿದರು.

1994 ರಲ್ಲಿ ಏಕಪಕ್ಷೀಯ ಕದನ ವಿರಾಮದ ನಂತರ, ನನಗೆ 32 ಪ್ರಕರಣಗಳಲ್ಲಿ ಜಾಮೀನು ನೀಡಲಾಗಿತ್ತು ಮಾತ್ರವಲ್ಲದೆ ಯಾವುದೇ ಪ್ರಕರಣಗಳನ್ನು ಮುಂದುವರಿಸಲಾಗಿಲ್ಲ" ಎಂದು ಮಲಿಕ್ ತಿಳಿಸಿದರು.

"ಪಿ ವಿ ನರಸಿಂಹ ರಾವ್, ಎಚ್ ಡಿ ದೇವೇಗೌಡ, ಐಕೆ ಗುಜ್ರಾಲ್, ಅಟಲ್ ಬಿಹಾರಿ ವಾಜಪೇಯಿ, ಡಾ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಐದು ವರ್ಷಗಳ ಅವಧಿಯಲ್ಲಿಯೂ ಸಹ ಕದನ ವಿರಾಮ ಪಾಲಿಸಲಾಗಿದೆ. ಈಗ ಇದ್ದಕ್ಕಿದ್ದಂತೆ ಎರಡನೇ ಅವಧಿಯಲ್ಲಿ ಪ್ರಸ್ತುತ ಸರ್ಕಾರವು ನನ್ನ ವಿರುದ್ಧ 35 ವರ್ಷಗಳ ಹಳೆಯ ಭಯೋತ್ಪಾದಕ ಪ್ರಕರಣಗಳ ವಿಚಾರಣೆ ಆರಂಭಿಸಿದೆ. ಇದು ಕದನ ವಿರಾಮ ಒಪ್ಪಂದಕ್ಕೆ ವಿರುದ್ಧವಾಗಿದೆ" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ: ಡಿ ಕೆ ಶಿವಕುಮಾರ್

ದೇವನಹಳ್ಳಿಯ 1,777 ಎಕರೆ ಜಮೀನು 'ಶಾಶ್ವತ ವಿಶೇಷ ಕೃಷಿ ವಲಯ'; ಭೂಮಿ ಮಾರಾಟಕ್ಕೆ ಕಡಿವಾಣ ಇಲ್ಲ: ಸರ್ಕಾರ

ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

SCROLL FOR NEXT