ಒಮರ್ ಅಬ್ದುಲ್ಲಾ 
ದೇಶ

ಕಾಶ್ಮೀರ: ವಕ್ಫ್ ಮಸೂದೆ, 48 ಅಧಿಕಾರಿಗಳ ವರ್ಗಾವಣೆ ಖಂಡಿಸಿ NC, ಮಿತ್ರಪಕ್ಷಗಳಿಂದ ನಿರ್ಣಯ ಅಂಗೀಕಾರ

ಇಂದು ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮತ್ತು ಪಕ್ಷೇತರ ಶಾಸಕರು ಸೇರಿದಂತೆ ಆಡಳಿತರೂಢ ಎನ್‌ಸಿ ಶಾಸಕರು ಭಾಗವಹಿಸಿದ್ದರು.

ಶ್ರೀನಗರ: ಶ್ರೀನಗರದಲ್ಲಿ ಶುಕ್ರವಾರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಅದರ ಮಿತ್ರಪಕ್ಷಗಳ ಜಂಟಿ ಶಾಸಕಾಂಗ ಸಭೆಯಲ್ಲಿ, ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಖಂಡಿಸಿ ಮತ್ತು 48 ಅಧಿಕಾರಿಗಳ ವರ್ಗಾವಣೆ ಖಂಡಿಸಿ ಎರಡು ಪ್ರತ್ಯೇಕ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಇಂದು ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮತ್ತು ಪಕ್ಷೇತರ ಶಾಸಕರು ಸೇರಿದಂತೆ ಆಡಳಿತರೂಢ ಎನ್‌ಸಿ ಶಾಸಕರು ಭಾಗವಹಿಸಿದ್ದರು.

ಈದ್ ಹಬ್ಬದಂದು ಜೆ & ಕೆ ಆಡಳಿತ ಸೇವೆ(ಜೆಕೆಎಎಸ್)ಯ 48 ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಚುನಾಯಿತ ಸರ್ಕಾರವನ್ನು ಕಡೆಗಣಿಸಿದ್ದಾರೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ.

"ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಒಮರ್ ಅಬ್ದುಲ್ಲಾ ಅಧ್ಯಕ್ಷತೆ ವಹಿಸಿದ್ದರು. ಇದರಲ್ಲಿ ಎನ್‌ಸಿ ಮತ್ತು ಕಾಂಗ್ರೆಸ್ ಹಾಗೂ ಪಕ್ಷೇತರ ಶಾಸಕರು ಭಾಗವಹಿಸಿದ್ದರು" ಎಂದು ಹಿರಿಯ ಎನ್‌ಸಿ ನಾಯಕ ಮತ್ತು ಶಾಸಕ ತನ್ವೀರ್ ಸಾದಿಕ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಭೆಯಲ್ಲಿ ಎರಡು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಯಿತು. ಒಂದು ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸುವುದನ್ನು ಖಂಡಿಸುವುದು ಮತ್ತು ಇನ್ನೊಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸುವುದನ್ನು ವಿರೋಧಿಸಿ ನಿರ್ಣಯ ಅಂಗೀಕರಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT