ಸಾಂದರ್ಭಿಕ ಚಿತ್ರ 
ದೇಶ

ನಕಲಿ ಕಲಬೆರಕೆ ಪನ್ನೀರ್: ಕ್ರಮಕ್ಕೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವರಿಗೆ ಪ್ರಲ್ಹಾದ್ ಜೋಶಿ ಪತ್ರ

ದೇಶಾದ್ಯಂತ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ(NCH) ವ್ಯಾಪಕ ದೂರುಗಳು ಬರುತ್ತಿವೆ

ನವದೆಹಲಿ: ದೇಶಾದ್ಯಂತ ಮಾರುಕಟ್ಟೆಯಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್‌ ಮಾರಾಟವಾಗುತ್ತಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಬೆಳಕು ಚೆಲ್ಲಿದ್ದಾರೆ.

ದೇಶಾದ್ಯಂತ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ(NCH) ವ್ಯಾಪಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ದೇಶದ ಮಾರುಕಟ್ಟೆಗಳಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟದ ಬಗ್ಗೆ ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಅನೇಕ ದೂರುಗಳನ್ನು ಸ್ವೀಕರಿಸಿದೆ. ಹೀಗಾಗಿ ಇದರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಿ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರ ಆರೋಗ್ಯ ಸಚಿವರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ದೇಶಾದ್ಯಂತ ಫಾಸ್ಟ್ ಫುಡ್ ಕೇಂದ್ರಗಳು, ರೆಸ್ಟೋರೆಂಟ್‌ಗಳು ಮತ್ತಿತರೆಡೆ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮಾಡಲಾಗುತ್ತಿದೆ. ವಿಶೇಷವಾಗಿ ಪನೀರ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥವಾಗಿದ್ದರಿಂದ ಇದನ್ನು ಗಮನಿಸಿರುವ ಸಾರ್ವಜನಿಕರು ಗ್ರಾಹಕ ಸಹಾಯವಾಣಿ ಮೂಲಕ ವ್ಯಾಪಕವಾಗಿ ದೂರು ಸಲ್ಲಿಸಿದ್ದಾರೆ. ಕಲಬೆರಕೆ ಪನೀರ್‌ ಸೇವನೆಯಿಂದ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಗ್ರಾಹಕರು ನೀಡಿದ ದೂರಿನಲ್ಲಿ ತೀವ್ರ ಕಳವಳ ಸಹ ವ್ಯಕ್ತಪಡಿಸಿದ್ದಾರೆ.

ಅಲ್ಲದೇ, ಆಹಾರ ಗುಣಮಟ್ಟ ಮತ್ತು ಸುರಕ್ಷತೆಗಾಗಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜನರ ದುಗುಡವನ್ನು ತಮ್ಮ ಗಮನಕ್ಕೆ ತರಬಯಸಿದ್ದೇನೆ ಎಂದು ಸಚಿವ ಜೋಶಿ ಅವರು ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದಾರೆ.

ಗ್ರಾಹಕರು ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಪೋರ್ಟಲ್‌ನಲ್ಲಿ ಹಲವಾರು ದೂರುಗಳನ್ನು ದಾಖಲಿಸಿದ್ದಾರೆ. ಇದು ದೇಶಾದ್ಯಂತ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಪ್ರವೃತ್ತಿಯನ್ನು ಎತ್ತಿ ತೋರಿಸುತ್ತದೆ. ಅಂತಹ ನಕಲಿ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಸೇವನೆಯು ಜನರ ತೀವ್ರ ಮತ್ತು ದೀರ್ಘ ಕಾಲದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಹಾಗಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಪನೀರ್‌ ಉತ್ಪಾದನಾ ಸಂಸ್ಥೆಗಳು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ 2006ರ ಪ್ರಕಾರ ಆಹಾರ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವರಲ್ಲಿ ಮನವಿ ಮಾಡಿದ್ದಾರೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT