ಅಖಿಲೇಶ್ ಯಾದವ್ 
ದೇಶ

ಷೇರು ಮಾರುಕಟ್ಟೆ ಕುಸಿತ: ಜನಸಾಮಾನ್ಯರು ಹಣ ಕಳೆದುಕೊಳ್ಳಲು ಕೇಂದ್ರವೇ ಕಾರಣ- ಅಖಿಲೇಶ್ ಯಾದವ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇ. 27 ರಷ್ಟು ಸೇರಿದಂತೆ ಪರಸ್ಪರ ಸುಂಕ ಘೋಷಿಸಿದ ನಂತರ ಶುಕ್ರವಾರ ಭಾರತೀಯ ಷೇರು ಮಾರುಕಟ್ಟೆ ಕುಸಿದಿತ್ತು.

ಲಖನೌ: ಜನಸಾಮಾನ್ಯರು ಹಣ ಕಳೆದುಕೊಳ್ಳುತ್ತಿದ್ದು, ಆರ್ಥಿಕತೆಗೂ ಮುಳುವಾಗುವ ಸಾಧ್ಯತೆಯಿರುವುದರಿಂದ ಭಾರತದ ಷೇರು ಮಾರುಕಟ್ಟೆ ಕುಸಿತದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯವಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಶನಿವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅಖಿಲೇಶ್ ಯಾದವ್, ಆರ್ಥಿಕತೆಯ ಈ ಡಬಲ್ ವಿಷ ವರ್ತುಲಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇ. 27 ರಷ್ಟು ಸೇರಿದಂತೆ ಪರಸ್ಪರ ಸುಂಕ ಘೋಷಿಸಿದ ನಂತರ ಶುಕ್ರವಾರ ಭಾರತೀಯ ಷೇರು ಮಾರುಕಟ್ಟೆ ಕುಸಿದಿತ್ತು.

ಹೂಡಿಕೆ ಮಾಡಲು ಮತ್ತು ಸರಕು, ವಾಹನ, ಭೂಮಿ ಖರೀದಿಗಾಗಿ ಜನರು ಇಟ್ಟಿದ್ದ ಹಣವನ್ನು ಕಳೆದುಕೊಳ್ಳುತ್ತಿರುವುದರಿಂದ ದೇಶದ ಷೇರುಪೇಟೆಯಲ್ಲಿ ಲಕ್ಷಾಂತರ ಕೋಟಿ ರೂ. ನಷ್ಟವಾಗುತ್ತಿರುವ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯವಾಗಿದೆ. ಇವು ಮಾರುಕಟ್ಟೆಯಲ್ಲಿ ಖರೀದಿ ಮತ್ತು ಮಾರಾಟದ ಚಕ್ರಗಳಾಗಿದ್ದು, ಆರ್ಥಿಕತೆಯೂ ಆಗಿರುತ್ತವೆ. ಷೇರು ಮಾರುಕಟ್ಟೆಯಲ್ಲಿ ಜನ ಹಣವನ್ನು ಕಳೆದುಕೊಂಡರೆ ಮಾರುಕಟ್ಟೆ ಮತ್ತು ಆರ್ಥಿಕತೆ ಎರಡೂ ಹಾಳಾಗುತ್ತವೆ ಎಂದು ಯಾದವ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಬಿಎಸ್ ಇ ಸೆನ್ಸೆಕ್ಸ್ ಸುಮಾರು 900 ಪಾಯಿಂಟ್ ಗಳಷ್ಟು ಕುಸಿದು 76,000 ಮಟ್ಟಕ್ಕಿಂತ ಕೆಳಗೆ ತಲುಪಿದ್ದರಿಂದ ಹೂಡಿಕೆದಾರರ ರೂ. 10 ಲಕ್ಷ ಕೋಟಿ ಸಂಪತ್ತು ಕರಗಿದೆ.

ತಮ್ಮ ಉಳಿತಾಯವನ್ನು ಷೇರು ಮಾರುಕಟ್ಟೆಯಲ್ಲಿ ಹಾಕುವ ಯುವ ಜನತೆ ಮಾರುಕಟ್ಟೆಯ ಈ ಅನಿಶ್ಚಿತತೆಗೆ ಬಲಿಯಾಗುತ್ತಿದ್ದಾರೆ. ಇದು ಷೇರು ಮಾರುಕಟ್ಟೆಯ ಭವಿಷ್ಯಕ್ಕೆ ಸಕಾರಾತ್ಮಕ ಸಂಕೇತವಾಗುವುದಿಲ್ಲ, ಈ ಆರ್ಥಿಕತಯ ವಿಷ ವರ್ತುಲಕ್ಕೆ ಬಿಜೆಪಿ ಸರ್ಕಾರ ನೇರ ಹೊಣೆ ಮಾತ್ರವಲ್ಲದೇ, ಅದು ಕೂಡಾ ತಪಿತಸ್ಥ ಈಗ ಹೂಡಿಕೆದಾರರು ಬಿಜೆಪಿ ಬೇಡ ಎನ್ನುತ್ತಿದ್ದಾರೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT