ಸುಪ್ರೀಂಕೋರ್ಟ್ 
ದೇಶ

ಉತ್ತರ ಪ್ರದೇಶ: ವಿಚಿತ್ರ, ಆಘಾತಕಾರಿ! ಸಿವಿಲ್ ವ್ಯಾಜ್ಯಗಳು ಕ್ರಿಮಿನಲ್ ಪ್ರಕರಣಗಳಾಗಿ ಪರಿವರ್ತನೆ, ಪೊಲೀಸರಿಗೆ ಸುಪ್ರೀಂ ಕೋರ್ಟ್ ತರಾಟೆ

ರಾಜ್ಯದಲ್ಲಿನ ವಕೀಲರು ಸಿವಿಲ್ ನ್ಯಾಯವ್ಯಾಪ್ತಿ ಎಂಬುದನ್ನೇ ಮರೆತಿರುವಂತೆ ತೋರುತ್ತಿದೆ ಎಂದು ಪೀಠ ಹೇಳಿದೆ.

ನವದೆಹಲಿ: ಉತ್ತರ ಪ್ರದೇಶದಲ್ಲಿ ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಎಫ್‌ಐಆರ್‌ಗಳನ್ನು ದಾಖಲಿಸಿರುವ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಅಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ಕಾನೂನನ್ನು ದಿನೇ ದಿನೇ ಜಾರಿ ಮಾಡಿರುವುದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಸೋಮವಾರ ಹೇಳಿದೆ.

"ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಿವಿಲ್ ವ್ಯಾಜ್ಯಗಳನ್ನು ಕ್ರಿಮಿನಲ್ ಪ್ರಕರಣವನ್ನಾಗಿ ಪರಿವರ್ತಿಸುವುದು ಸ್ವೀಕಾರಾರ್ಹವಲ್ಲ" ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯ ಪೀಠ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ತನ್ನ ಮುಂದೆ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಾಲಯ ಸೂಚಿಸಿದೆ.

ಪೀಠವು ತನ್ನ ತೀರ್ಪುಗಳನ್ನು ಉಲ್ಲೇಖಿಸಿ, ಸಿವಿಲ್ ವ್ಯಾಜ್ಯಗಳಲ್ಲಿ ಎಫ್‌ಐಆರ್ ದಾಖಲಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಅಲ್ಲದೇ ಕ್ರಿಮಿನಲ್ ಕಾನೂನನ್ನು ಏಕೆ ಜಾರಿಗೆ ತರಲಾಗಿದೆ ಎಂಬುದನ್ನು ವಿವರಿಸುವ ಅಫಿಡವಿಟ್ ಸಲ್ಲಿಸಲು ಸ್ಟೇಷನ್ ಹೌಸ್ ಅಧಿಕಾರಿ ಅಥವಾ ಗೌತಮ್ ಬುಧ್ ನಗರ ಜಿಲ್ಲಾ ಪೊಲೀಸ್ ಠಾಣೆಯ ತನಿಖಾಧಿಕಾರಿಗೆ ಹೇಳಿದೆ.

"ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಏನೋ ವಿಚಿತ್ರ ಮತ್ತು ಆಘಾತಕಾರಿ ಸಂಗತಿಗಳು ನಡೆಯುತ್ತಿವೆ. ದಿನನಿತ್ಯದ ಸಿವಿಲ್ ಮೊಕದ್ದಮೆಗಳನ್ನು ಕ್ರಿಮಿನಲ್ ಮೊಕದ್ದಮೆಗಳಾಗಿ ಪರಿವರ್ತಿಸಲಾಗುತ್ತಿದೆ. ಇದು ಅಸಂಬದ್ಧವಾಗಿದೆ. ಕೇವಲ ಹಣ ನೀಡದಿರುವುದು ಅಪರಾಧವಾಗಲು ಸಾಧ್ಯವಿಲ್ಲ" ಎಂದು ಸಿಜೆಐ ಹೇಳಿದರು. ರಾಜ್ಯದಲ್ಲಿನ ವಕೀಲರು ಸಿವಿಲ್ ನ್ಯಾಯವ್ಯಾಪ್ತಿ ಎಂಬುದನ್ನೇ ಮರೆತಿರುವಂತೆ ತೋರುತ್ತಿದೆ ಎಂದು ಪೀಠ ಹೇಳಿದೆ.

ಸಿವಿಲ್ ವ್ಯಾಜ್ಯಗಳ ಇತ್ಯರ್ಥಕ್ಕೆ ಬಹಳ ಸಮಯ:

ಸಿವಿಲ್ ವ್ಯಾಜ್ಯಗಳು ಇತ್ಯರ್ಥವಾಗಲು ಬಹಳ ಸಮಯ ತೆಗೆದುಕೊಳ್ಳುವುದರಿಂದ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತದೆ ಎಂದು ವಕೀಲರೊಬ್ಬರು ಹೇಳಿದ ನಂತರ, "ಸಿವಿಲ್ ಪ್ರಕರಣಗಳು ಬಹಳ ಸಮಯ ತೆಗೆದುಕೊಳ್ಳುತ್ತದೆ ಎಂಬ ಕಾರಣಕ್ಕಾಗಿ, ನೀವು ಎಫ್‌ಐಆರ್ ದಾಖಲಿಸಿ ಕ್ರಿಮಿನಲ್ ಕಾನೂನನ್ನು ಜಾರಿಗೆ ತರುತ್ತೀರಾ? ಎಂದು ಉನ್ನತ ನ್ಯಾಯಾಲಯವು ಕೆರಳಿತು. ನೋಯ್ಡಾದ ಸೆಕ್ಟರ್ -39 ನಲ್ಲಿರುವ ಪೊಲೀಸ್ ಠಾಣೆಯ ಐಒಗೆ ವಿಚಾರಣಾ ನ್ಯಾಯಾಲಯದಲ್ಲಿ ಸಾಕ್ಷಿ ಪೆಟ್ಟಿಗೆಯಲ್ಲಿ ಹಾಜರಾಗಲು ಮತ್ತು ಪ್ರಕರಣದಲ್ಲಿ ಎಫ್‌ಐಆರ್ ನೋಂದಣಿಯನ್ನು ಸಮರ್ಥಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಉದ್ಯಮಿ ದೀಪಕ್ ಬೆಹಲ್ ಅವರೊಂದಿಗಿನ ಹಣದ ವಿವಾದದಲ್ಲಿ ಅಲಹಾಬಾದ್ ಹೈಕೋರ್ಟ್ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ನಿರಾಕರಿಸಿದ ವಿರುದ್ಧ ವಕೀಲ ಚಂದ್ ಖುರೇಷಿ ಮೂಲಕ ಆರೋಪಿ ದೇಬು ಸಿಂಗ್ ಮತ್ತು ದೀಪಕ್ ಸಿಂಗ್ ಸಲ್ಲಿಸಿದ ಮನವಿಯನ್ನು ಪೀಠವು ವಿಚಾರಣೆ ನಡೆಸುತ್ತಿದೆ. ನೋಯ್ಡಾ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ, ಆದರೆ ಅವರ ವಿರುದ್ಧದ ಚೆಕ್ ಬೌನ್ಸ್ ಪ್ರಕರಣವು ಮುಂದುವರಿಯುತ್ತದೆ ಎಂದು ಹೇಳಿದೆ.

ಐಪಿಸಿಯ ಸೆಕ್ಷನ್ 406 (ಕ್ರಿಮಿನಲ್ ನಂಬಿಕೆಯ ಉಲ್ಲಂಘನೆ), 506 (ಕ್ರಿಮಿನಲ್ ಬೆದರಿಕೆ) ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ನೋಯ್ಡಾದಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಕಳೆದ ವರ್ಷ ಸೆಪ್ಟೆಂಬರ್ 03 ರ ಅಲಹಾಬಾದ್ ಹೈಕೋರ್ಟ್‌ ತೀರ್ಪಿನ ವಿರುದ್ಧ ಬಲ್ಜೀತ್ ಸಿಂಗ್ ಅವರ ಪುತ್ರರಾದ ದೇಬು ಸಿಂಗ್ ಮತ್ತು ದೀಪಕ್ ಸಿಂಗ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಎಫ್‌ಐಆರ್ ರದ್ದುಗೊಳಿಸುವಂತೆ ಅವರ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT