ಜ್ಞಾನದೇವ್ ಅಹುಜಾ online desk
ದೇಶ

ದಲಿತ ಕಾಂಗ್ರೆಸ್ ಶಾಸಕ ಭೇಟಿ ನೀಡಿದ್ದಕ್ಕೆ ದೇವಾಲಯದ ಶುದ್ಧೀಕರಣ: ಬಿಜೆಪಿ ನಾಯಕ ಪಕ್ಷದಿಂದ ಕಿಕ್ ಔಟ್!

ರಾಮನವಮಿ ಅಂಗವಾಗಿ ಅಲ್ವಾರ್‌ನಲ್ಲಿ ದೇವಾಲಯವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ ನ ದಲಿತ ನಾಯಕ ಟಿಕಾರಾಮ್ ಜುಲ್ಲಿ ಭಾಗಿಯಾಗಿದ್ದರು.

ಜೈಪುರ: ದಲಿತ ಕಾಂಗ್ರೆಸ್ ಶಾಸಕನೋರ್ವ ದೇವಾಲಯಕ್ಕೆ ಪ್ರವೇಶಿಸಿದ್ದ ಹಿನ್ನೆಲೆಯಲ್ಲಿ ದೇವಾಲಯ ಶುದ್ಧೀಕರಣ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ವರದಿಯಾಗಿದ್ದು, ವ್ಯಾಕಪ ಖಂಡನೆ ವ್ಯಕ್ತವಾಗುತ್ತಿದೆ.

ಬಿಜೆಪಿ ಶಾಸಕ ಜ್ಞಾನದೇವ್ ಅಹುಜಾ ದಲಿತ ಶಾಸಕ ಪ್ರವೇಶಿಸಿದ್ದಕ್ಕಾಗಿ ದೇವಾಲಯ ಶುದ್ಧೀಕರಣ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಲಾಗಿದೆ.

ರಾಮನವಮಿ ಅಂಗವಾಗಿ ಅಲ್ವಾರ್‌ನಲ್ಲಿ ದೇವಾಲಯವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ ನ ದಲಿತ ನಾಯಕ ಟಿಕಾರಾಮ್ ಜುಲ್ಲಿ ಭಾಗಿಯಾಗಿದ್ದರು. ಇದಾದ ಬಳಿಕ 'ಗಂಗಾಜಲ' ಸಿಂಪಡಿಸಿ ದೇವಾಲಯದ ಆವರಣವನ್ನು "ಶುದ್ಧೀಕರಣ" ಮಾಡಿದ್ದಾರೆ.

ದಲಿತ ಮತದಾರರು ಪ್ರಮುಖ ಪಾತ್ರ ವಹಿಸುವ ಪೂರ್ವ ರಾಜಸ್ಥಾನದಲ್ಲಿ ಜ್ಞಾನದೇವ್ ಅಹುಜಾ ಅವರ 'ಶುದ್ಧೀಕರಣ'ದ ಸಾಹಸ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಬಿಜೆಪಿ,ಅಹುಜಾ ಅವರಿಗೆ ನೋಟಿಸ್ ಕಳುಹಿಸಿದೆ. ಬಿಜೆಪಿ ಸಂಸದ ಮತ್ತು ರಾಜಸ್ಥಾನದ ಹಿರಿಯ ನಾಯಕ ದಾಮೋದರ್ ಅಗರ್ವಾಲ್ ಅವರು ನೀಡಿದ ನೋಟಿಸ್‌ನಲ್ಲಿ ಅಹುಜಾ ಅವರಿಂದ ಮೂರು ದಿನಗಳಲ್ಲಿ ವಿವರಣೆಯನ್ನು ಕೋರಿದೆ.

ಮಾಜಿ ಶಾಸಕರು ಮೂರು ದಿನಗಳಲ್ಲಿ ರಾಜ್ಯ ಪಕ್ಷದ ಮುಖ್ಯಸ್ಥ ಮದನ್ ರಾಥೋಡ್‌ಗೆ ತಮ್ಮ ಪ್ರತಿಕ್ರಿಯೆಯನ್ನು ಕಳುಹಿಸದಿದ್ದರೆ, ಅವರು ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ.

"ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ತೆಗೆದುಕೊಳ್ಳುವಾಗ, ಜಾತಿ, ಲಿಂಗ ಮತ್ತು ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ ಎಂದು ನೀವು ಪ್ರಮಾಣವಚನ ಸ್ವೀಕರಿಸಿದ್ದೀರಿ. ಆದರೆ ಟಿಕರಾಮ್ ಜಲ್ಲಿ ಅವರ ಭೇಟಿಯನ್ನು ಪ್ರತಿಭಟಿಸಲು ನೀವು 'ಗಂಗಾಜಲ' ಸಿಂಪಡಿಸಿದ್ದೀರಿ. ನಿಮ್ಮ ಕ್ರಮವು ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದೆ ಮತ್ತು ಅಶಿಸ್ತಿನ ವರ್ಗಕ್ಕೆ ಸೇರುತ್ತದೆ" ಎಂದು ನೋಟಿಸ್ ಹೇಳಿದೆ.

ಕಾಂಗ್ರೆಸ್ ಪ್ರತಿಕ್ರಿಯೆ

ಅಹುಜಾ ಅವರ ಹೇಳಿಕೆಗಳು ದಲಿತರ ಬಗ್ಗೆ ಬಿಜೆಪಿಯ ದೃಷ್ಟಿಕೋನಗಳನ್ನು ಪ್ರತಿಬಿಂಬಿಸುತ್ತವೆ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. "ಇದು ಕೇವಲ ನಂಬಿಕೆಯ ಮೇಲಿನ ದಾಳಿಯಲ್ಲ, ಆದರೆ ಅಸ್ಪೃಶ್ಯತೆಯಂತಹ ಅಪರಾಧವನ್ನು ಪ್ರೋತ್ಸಾಹಿಸುವ ನಡೆಯಾಗಿದೆ. ಬಿಜೆಪಿ ದಲಿತರನ್ನು ಎಷ್ಟು ದ್ವೇಷಿಸುತ್ತದೆಯೆಂದರೆ ಅವರು ನಾವು 'ಪೂಜೆ' ಮಾಡುವುದನ್ನು ನೋಡಲು ಸಾಧ್ಯವಿಲ್ಲವೇ? ದೇವರುಗಳು ಬಿಜೆಪಿ ನಾಯಕರಿಗೆ ಮಾತ್ರ ಸೇರಿದ್ದಾರೆಯೇ?" ಎಂದು ಕಾಂಗ್ರೆಸ್ ಕೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT