ಜ್ಞಾನದೇವ್ ಅಹುಜಾ online desk
ದೇಶ

ದಲಿತ ಕಾಂಗ್ರೆಸ್ ಶಾಸಕ ಭೇಟಿ ನೀಡಿದ್ದಕ್ಕೆ ದೇವಾಲಯದ ಶುದ್ಧೀಕರಣ: ಬಿಜೆಪಿ ನಾಯಕ ಪಕ್ಷದಿಂದ ಕಿಕ್ ಔಟ್!

ರಾಮನವಮಿ ಅಂಗವಾಗಿ ಅಲ್ವಾರ್‌ನಲ್ಲಿ ದೇವಾಲಯವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ ನ ದಲಿತ ನಾಯಕ ಟಿಕಾರಾಮ್ ಜುಲ್ಲಿ ಭಾಗಿಯಾಗಿದ್ದರು.

ಜೈಪುರ: ದಲಿತ ಕಾಂಗ್ರೆಸ್ ಶಾಸಕನೋರ್ವ ದೇವಾಲಯಕ್ಕೆ ಪ್ರವೇಶಿಸಿದ್ದ ಹಿನ್ನೆಲೆಯಲ್ಲಿ ದೇವಾಲಯ ಶುದ್ಧೀಕರಣ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ವರದಿಯಾಗಿದ್ದು, ವ್ಯಾಕಪ ಖಂಡನೆ ವ್ಯಕ್ತವಾಗುತ್ತಿದೆ.

ಬಿಜೆಪಿ ಶಾಸಕ ಜ್ಞಾನದೇವ್ ಅಹುಜಾ ದಲಿತ ಶಾಸಕ ಪ್ರವೇಶಿಸಿದ್ದಕ್ಕಾಗಿ ದೇವಾಲಯ ಶುದ್ಧೀಕರಣ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಲಾಗಿದೆ.

ರಾಮನವಮಿ ಅಂಗವಾಗಿ ಅಲ್ವಾರ್‌ನಲ್ಲಿ ದೇವಾಲಯವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ ನ ದಲಿತ ನಾಯಕ ಟಿಕಾರಾಮ್ ಜುಲ್ಲಿ ಭಾಗಿಯಾಗಿದ್ದರು. ಇದಾದ ಬಳಿಕ 'ಗಂಗಾಜಲ' ಸಿಂಪಡಿಸಿ ದೇವಾಲಯದ ಆವರಣವನ್ನು "ಶುದ್ಧೀಕರಣ" ಮಾಡಿದ್ದಾರೆ.

ದಲಿತ ಮತದಾರರು ಪ್ರಮುಖ ಪಾತ್ರ ವಹಿಸುವ ಪೂರ್ವ ರಾಜಸ್ಥಾನದಲ್ಲಿ ಜ್ಞಾನದೇವ್ ಅಹುಜಾ ಅವರ 'ಶುದ್ಧೀಕರಣ'ದ ಸಾಹಸ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಬಿಜೆಪಿ,ಅಹುಜಾ ಅವರಿಗೆ ನೋಟಿಸ್ ಕಳುಹಿಸಿದೆ. ಬಿಜೆಪಿ ಸಂಸದ ಮತ್ತು ರಾಜಸ್ಥಾನದ ಹಿರಿಯ ನಾಯಕ ದಾಮೋದರ್ ಅಗರ್ವಾಲ್ ಅವರು ನೀಡಿದ ನೋಟಿಸ್‌ನಲ್ಲಿ ಅಹುಜಾ ಅವರಿಂದ ಮೂರು ದಿನಗಳಲ್ಲಿ ವಿವರಣೆಯನ್ನು ಕೋರಿದೆ.

ಮಾಜಿ ಶಾಸಕರು ಮೂರು ದಿನಗಳಲ್ಲಿ ರಾಜ್ಯ ಪಕ್ಷದ ಮುಖ್ಯಸ್ಥ ಮದನ್ ರಾಥೋಡ್‌ಗೆ ತಮ್ಮ ಪ್ರತಿಕ್ರಿಯೆಯನ್ನು ಕಳುಹಿಸದಿದ್ದರೆ, ಅವರು ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ.

"ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ತೆಗೆದುಕೊಳ್ಳುವಾಗ, ಜಾತಿ, ಲಿಂಗ ಮತ್ತು ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ ಎಂದು ನೀವು ಪ್ರಮಾಣವಚನ ಸ್ವೀಕರಿಸಿದ್ದೀರಿ. ಆದರೆ ಟಿಕರಾಮ್ ಜಲ್ಲಿ ಅವರ ಭೇಟಿಯನ್ನು ಪ್ರತಿಭಟಿಸಲು ನೀವು 'ಗಂಗಾಜಲ' ಸಿಂಪಡಿಸಿದ್ದೀರಿ. ನಿಮ್ಮ ಕ್ರಮವು ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದೆ ಮತ್ತು ಅಶಿಸ್ತಿನ ವರ್ಗಕ್ಕೆ ಸೇರುತ್ತದೆ" ಎಂದು ನೋಟಿಸ್ ಹೇಳಿದೆ.

ಕಾಂಗ್ರೆಸ್ ಪ್ರತಿಕ್ರಿಯೆ

ಅಹುಜಾ ಅವರ ಹೇಳಿಕೆಗಳು ದಲಿತರ ಬಗ್ಗೆ ಬಿಜೆಪಿಯ ದೃಷ್ಟಿಕೋನಗಳನ್ನು ಪ್ರತಿಬಿಂಬಿಸುತ್ತವೆ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. "ಇದು ಕೇವಲ ನಂಬಿಕೆಯ ಮೇಲಿನ ದಾಳಿಯಲ್ಲ, ಆದರೆ ಅಸ್ಪೃಶ್ಯತೆಯಂತಹ ಅಪರಾಧವನ್ನು ಪ್ರೋತ್ಸಾಹಿಸುವ ನಡೆಯಾಗಿದೆ. ಬಿಜೆಪಿ ದಲಿತರನ್ನು ಎಷ್ಟು ದ್ವೇಷಿಸುತ್ತದೆಯೆಂದರೆ ಅವರು ನಾವು 'ಪೂಜೆ' ಮಾಡುವುದನ್ನು ನೋಡಲು ಸಾಧ್ಯವಿಲ್ಲವೇ? ದೇವರುಗಳು ಬಿಜೆಪಿ ನಾಯಕರಿಗೆ ಮಾತ್ರ ಸೇರಿದ್ದಾರೆಯೇ?" ಎಂದು ಕಾಂಗ್ರೆಸ್ ಕೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel