ಕೇದಾರ್ ಜಾಧವ್ 
ದೇಶ

ಮುಂಬೈ: ಮಾಜಿ ಕ್ರಿಕೆಟಿಗ ಕೇದಾರ್ ಜಾಧವ್ ಬಿಜೆಪಿಗೆ ಸೇರ್ಪಡೆ

2014 ರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಾಯಕತ್ವದ ಬಿಜೆಪಿ ಸರ್ಕಾರದ ಸಾಧನೆಗಳಿಂದ ಪ್ರಭಾವಿತವಾಗಿರುವುದಾಗಿ ಹೇಳಿದರು.

ಮುಂಬೈ: ಭಾರತದ ಮಾಜಿ ಕ್ರಿಕೆಟ್ ಆಟಗಾರ ಕೇದಾರ್ ಜಾಧವ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂಬೈಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ಜಾದವ್ ಕೇಸರಿ ಪಕ್ಷ ಸೇರಿಕೊಂಡರು. ಅವರಿಗೆ ಕೇಸರಿ ಶಾಲು ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಾವಂಕುಲೆ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಕೇದಾರ್ ಜಾಧವ್, 2014 ರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಾಯಕತ್ವದ ಬಿಜೆಪಿ ಸರ್ಕಾರದ ಸಾಧನೆಗಳಿಂದ ಪ್ರಭಾವಿತವಾಗಿರುವುದಾಗಿ ಹೇಳಿದರು.

ಬಿಜೆಪಿಗೆ ನನ್ನಿಂದ ಸಾಧ್ಯವಾದಷ್ಟು ಸಣ್ಣ ಕೊಡುಗೆಯನ್ನು ನೀಡುವುದು ನನ್ನ ಗುರಿ. ನನಗೆ ಯಾವುದೇ ಜವಾಬ್ದಾರಿ ಸಿಕ್ಕರೂ, ಅದನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಪೂರೈಸಲು ಪ್ರಯತ್ನಿಸುತ್ತೇನೆ ಎಂದರು.

ಕೇದಾರ್ ಜಾಧವ್ ಭಾರತದ ಪರ 73 ಏಕದಿನ ಮತ್ತು 9 ಟಿ20 ಅಂತಾರಾಷ್ಟ್ರೀಯ ಪಂದ್ಯ ಆಡಿದ್ದಾರೆ. ಈ ಅವಧಿಯಲ್ಲಿ, 2 ಶತಕ ಹಾಗೂ 6 ಅರ್ಧಶತಕ ಸೇರಿದಂತೆ 1,389 ರನ್‌ ಗಳಿಸಿದ್ದಾರೆ. 9 ಟಿ20 ಪಂದ್ಯಗಳಲ್ಲಿ ಕೇವಲ 122 ರನ್ ಗಳಿಸಿದ್ದಾರೆ.

ತಮ್ಮ ವಿಶಿಷ್ಠ ಬೌಲಿಂಗ್‌ ಶೈಲಿಯಿಂದಲೇ ಹೆಸರುವಾಸಿಯಾದ ಕೇದಾರ್ ಜಾಧವ್, 27 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಪರ ಆಡಿದ್ದಾರೆ. ಕೇದಾರ್ ಜಾಧವ್ ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟಿನಿಂದ ನಿವೃತ್ತರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT