ಕೇದಾರ್ ಜಾಧವ್ 
ದೇಶ

ಮುಂಬೈ: ಮಾಜಿ ಕ್ರಿಕೆಟಿಗ ಕೇದಾರ್ ಜಾಧವ್ ಬಿಜೆಪಿಗೆ ಸೇರ್ಪಡೆ

2014 ರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಾಯಕತ್ವದ ಬಿಜೆಪಿ ಸರ್ಕಾರದ ಸಾಧನೆಗಳಿಂದ ಪ್ರಭಾವಿತವಾಗಿರುವುದಾಗಿ ಹೇಳಿದರು.

ಮುಂಬೈ: ಭಾರತದ ಮಾಜಿ ಕ್ರಿಕೆಟ್ ಆಟಗಾರ ಕೇದಾರ್ ಜಾಧವ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂಬೈಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ಜಾದವ್ ಕೇಸರಿ ಪಕ್ಷ ಸೇರಿಕೊಂಡರು. ಅವರಿಗೆ ಕೇಸರಿ ಶಾಲು ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಾವಂಕುಲೆ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಕೇದಾರ್ ಜಾಧವ್, 2014 ರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಾಯಕತ್ವದ ಬಿಜೆಪಿ ಸರ್ಕಾರದ ಸಾಧನೆಗಳಿಂದ ಪ್ರಭಾವಿತವಾಗಿರುವುದಾಗಿ ಹೇಳಿದರು.

ಬಿಜೆಪಿಗೆ ನನ್ನಿಂದ ಸಾಧ್ಯವಾದಷ್ಟು ಸಣ್ಣ ಕೊಡುಗೆಯನ್ನು ನೀಡುವುದು ನನ್ನ ಗುರಿ. ನನಗೆ ಯಾವುದೇ ಜವಾಬ್ದಾರಿ ಸಿಕ್ಕರೂ, ಅದನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಪೂರೈಸಲು ಪ್ರಯತ್ನಿಸುತ್ತೇನೆ ಎಂದರು.

ಕೇದಾರ್ ಜಾಧವ್ ಭಾರತದ ಪರ 73 ಏಕದಿನ ಮತ್ತು 9 ಟಿ20 ಅಂತಾರಾಷ್ಟ್ರೀಯ ಪಂದ್ಯ ಆಡಿದ್ದಾರೆ. ಈ ಅವಧಿಯಲ್ಲಿ, 2 ಶತಕ ಹಾಗೂ 6 ಅರ್ಧಶತಕ ಸೇರಿದಂತೆ 1,389 ರನ್‌ ಗಳಿಸಿದ್ದಾರೆ. 9 ಟಿ20 ಪಂದ್ಯಗಳಲ್ಲಿ ಕೇವಲ 122 ರನ್ ಗಳಿಸಿದ್ದಾರೆ.

ತಮ್ಮ ವಿಶಿಷ್ಠ ಬೌಲಿಂಗ್‌ ಶೈಲಿಯಿಂದಲೇ ಹೆಸರುವಾಸಿಯಾದ ಕೇದಾರ್ ಜಾಧವ್, 27 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಪರ ಆಡಿದ್ದಾರೆ. ಕೇದಾರ್ ಜಾಧವ್ ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟಿನಿಂದ ನಿವೃತ್ತರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT