ತಹಾವೂರ್ ರಾಣಾ online desk
ದೇಶ

26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ 'ಶೀಘ್ರದಲ್ಲೇ' ಭಾರತಕ್ಕೆ ಹಸ್ತಾಂತರ

ರಾಣಾನನ್ನು ಶೀಘ್ರದಲ್ಲೇ ಹಸ್ತಾಂತರಿಸುವ ಸಾಧ್ಯತೆ 'ದಟ್ಟವಾಗಿದೆ' ಎಂದು ಮೂಲಗಳು ತಿಳಿಸಿವೆ. ಬುಧವಾರ ರಾಣಾ ಭಾರತಕ್ಕೆ ಬರುತ್ತಿಲ್ಲ ಮತ್ತು ಹಸ್ತಾಂತರ ಪ್ರಕ್ರಿಯೆಯು ನಡೆಯುತ್ತಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹಾವೂರ್ ರಾಣಾನನ್ನು 'ಶೀಘ್ರದಲ್ಲೇ' ಅಮೆರಿಕದಿಂದ ಭಾರತಕ್ಕೆ ಹಸ್ತಾಂತರಿಸುವ ನಿರೀಕ್ಷೆಯಿದೆ.

ಭಾರತದ ಸರ್ಕಾರಿ ಮೂಲಗಳ ಪ್ರಕಾರ, ಭಾರತದಿಂದ ಬಹು-ಏಜೆನ್ಸಿ ತಂಡವು ಅಮೆರಿಕಕ್ಕೆ ಹೋಗಿದೆ ಮತ್ತು ಎಲ್ಲಾ ದಾಖಲೆಗಳು ಮತ್ತು ಕಾನೂನುಬದ್ಧತೆಗಳನ್ನು ಅಮೆರಿಕದ ಅಧಿಕಾರಿಗಳೊಂದಿಗೆ ಪೂರ್ಣಗೊಳಿಸಲಾಗುತ್ತಿದೆ.

ರಾಣಾನನ್ನು ಶೀಘ್ರದಲ್ಲೇ ಹಸ್ತಾಂತರಿಸುವ ಸಾಧ್ಯತೆ 'ದಟ್ಟವಾಗಿದೆ' ಎಂದು ಮೂಲಗಳು ತಿಳಿಸಿವೆ. ಬುಧವಾರ ರಾಣಾ ಭಾರತಕ್ಕೆ ಬರುತ್ತಿಲ್ಲ ಮತ್ತು ಹಸ್ತಾಂತರ ಪ್ರಕ್ರಿಯೆಯು ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಗಡಿಪಾರು ತಪ್ಪಿಸಿಕೊಳ್ಳಲು ಯುಎಸ್ ಸುಪ್ರೀಂ ಕೋರ್ಟ್ ಗೆ ರಾಣಾ ಕೊನೆಯ ಪ್ರಯತ್ನವಾಗಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳು ಅವರ ಅರ್ಜಿಯನ್ನು ನಿರಾಕರಿಸಿದ ನಂತರ ಭಾರತಕ್ಕೆ ಹಸ್ತಾಂತರದಿಂದ ತಪ್ಪಿಸಿಕೊಳ್ಳುವ ರಾಣಾ ಅವರ ಕೊನೆಯ ಪ್ರಯತ್ನ ವಿಫಲವಾಗಿದೆ. ಇದಾದ ಕೆಲವೇ ದಿನಗಳಲ್ಲಿ ಹಸ್ತಾಂತರ ಪ್ರಕ್ರಿಯೆಯ ಅತ್ಯಂತ ಮಹತ್ವದ ಬೆಳವಣಿಗೆ ಸಂಭವಿಸಿದೆ.

ಲಾಸ್ ಏಂಜಲೀಸ್‌ನ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್‌ನಲ್ಲಿರುವ 64 ವರ್ಷದ ರಾಣಾ, ಫೆಬ್ರವರಿ 27, 2025 ರಂದು ಯುನೈಟೆಡ್ ಸ್ಟೇಟ್ಸ್‌ನ ಸುಪ್ರೀಂ ಕೋರ್ಟ್‌ನ ಅಸೋಸಿಯೇಟ್ ನ್ಯಾಯಮೂರ್ತಿ ಮತ್ತು ಒಂಬತ್ತನೇ ಸರ್ಕ್ಯೂಟ್‌ನ ಸರ್ಕ್ಯೂಟ್ ನ್ಯಾಯಮೂರ್ತಿ ಎಲೆನಾ ಕಗನ್ ಅವರಿಗೆ 'ಹೇಬಿಯಸ್ ಕಾರ್ಪಸ್ ರಿಟ್ ಅರ್ಜಿಗಾಗಿ ತಡೆಯಾಜ್ಞೆ ಬಾಕಿ ಇರುವ ಮೊಕದ್ದಮೆಗಾಗಿ ತುರ್ತು ಅರ್ಜಿ'ಯನ್ನು ಸಲ್ಲಿಸಿದ್ದರು.

ಕಗನ್ ಕಳೆದ ತಿಂಗಳ ಆರಂಭದಲ್ಲಿ ಅರ್ಜಿಯನ್ನು ನಿರಾಕರಿಸಿದ್ದರು. ನಂತರ ರಾಣಾ ಅವರು ನ್ಯಾಯಮೂರ್ತಿ ಕಗನ್ ಅವರಿಗೆ ಈ ಹಿಂದೆ ತಿಳಿಸಲಾದ 'ಹೇಬಿಯಸ್ ಕಾರ್ಪಸ್ ರಿಟ್ ಅರ್ಜಿಗಾಗಿ ತಡೆ ಬಾಕಿ ಇರುವ ಮೊಕದ್ದಮೆಗಾಗಿ ತುರ್ತು ಅರ್ಜಿ'ಯನ್ನು ನವೀಕರಿಸಿದ್ದರು ಮತ್ತು ನವೀಕರಿಸಿದ ಅರ್ಜಿಯನ್ನು ಯುಎಸ್ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್‌ಗೆ ನಿರ್ದೇಶಿಸಬೇಕೆಂದು ವಿನಂತಿಸಿದ್ದರು.

ಸೋಮವಾರ ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿನ ಸೂಚನೆಯಲ್ಲಿ ನ್ಯಾಯಾಲಯವು ಅರ್ಜಿಯನ್ನು ನಿರಾಕರಿಸಿದೆ ಎಂದು ಹೇಳಿದೆ.

ನ್ಯೂಯಾರ್ಕ್ ಮೂಲದ ಭಾರತೀಯ-ಅಮೆರಿಕನ್ ವಕೀಲ ರವಿ ಬಾತ್ರಾ ಪಿಟಿಐಗೆ ತಿಳಿಸಿದ್ದು, ರಾಣಾ ಅವರು ಹಸ್ತಾಂತರವನ್ನು ತಡೆಯಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಆದರೆ ನ್ಯಾಯಮೂರ್ತಿ ಕಗನ್ ಮಾರ್ಚ್ 6 ರಂದು ಅದನ್ನು ನಿರಾಕರಿಸಿದರು. ನಂತರ ಅರ್ಜಿಯನ್ನು ರಾಬರ್ಟ್ಸ್ ಮುಂದೆ ಸಲ್ಲಿಸಲಾಯಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT