ಸಾಂದರ್ಭಿಕ ಚಿತ್ರ 
ದೇಶ

ಮದುವೆಗೆ 9 ದಿನ ಬಾಕಿ ಇರುವಾಗಲೇ ಭಾವಿ ಅಳಿಯನ ಜೊತೆ ವಧುವಿನ ತಾಯಿ ಪರಾರಿ!

ವರನೊಂದಿಗೆ ಪರಾರಿಯಾಗುವಾಗ ವಧುವಿನ ತಾಯಿ, ಮಗಳ ಆಭರಣಗಳು ಮತ್ತು ಮದುವೆಗಾಗಿ ಉಳಿಸಿದ್ದ ಹಣವನ್ನೂ ತೆಗೆದುಕೊಂಡು ಹೋಗಿದ್ದಾಳೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶ: ಮದುವೆಗೆ ಕೇವಲ 9 ದಿನಗಳು ಬಾಕಿ ಇರುವಾಗಲೇ ವಧುವಿನ ತಾಯಿಯೊಂದಿಗೆ ವರ ಓಡಿಹೋದ ವಿಚಿತ್ರ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.

ಓಡಿ ಹೋದ ವರ, ತನ್ನ ಭಾವಿ ಅತ್ತೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಯಾರಿಗೂ ಅವರಿಬ್ಬರ ಸಂಬಂಧದ ಬಗ್ಗೆ ತಿಳಿದಿರಲಿಲ್ಲ. ವರನೊಂದಿಗೆ ಪರಾರಿಯಾಗುವಾಗ ವಧುವಿನ ತಾಯಿ, ಮಗಳ ಆಭರಣಗಳು ಮತ್ತು ಮದುವೆಗಾಗಿ ಉಳಿಸಿದ್ದ ಹಣವನ್ನೂ ತೆಗೆದುಕೊಂಡು ಹೋಗಿದ್ದಾಳೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಪರಾರಿಯಾದ ಮಹಿಳೆ, ಯುವಕನೊಂದಿಗೆ ತನ್ನ ಮಗಳ ಮದುವೆಯನ್ನು ಮಾಡಿಸಲು ಮುಂದಾಗಿದ್ದಳು. ಮದುವೆಯ ಸಿದ್ಧತೆಗಳ ನೆಪದಲ್ಲಿ ಬಾಯ್​ಫ್ರೆಂಡ್​ ಆಗಾಗ್ಗೆಮನೆಗೆ ಬರುತ್ತಿದ್ದ. ಆದರೆ, ಯಾರಿಗೂ ಇಬ್ಬರ ಬಗ್ಗೆ ಯಾವುದೇ ಅನುಮಾನ ಬಂದಿರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಆ ಯುವಕ ಮತ್ತು ಭಾವಿ ಅತ್ತೆಯ ನಡುವೆ ಪ್ರಣಯ ಸಂಬಂಧವೂ ಬೆಳೆಯಿತು. ಇದರ ನಡುವೆ ವರನು ತನ್ನ ಭಾವಿ ಅತ್ತೆಗೆ ಮೊಬೈಲ್ ಫೋನ್ ಉಡುಗೊರೆಯಾಗಿ ನೀಡಿದನು. ಆದರೆ, ತಾಯಿ ಮತ್ತು ಮಗನ ನಡುವೆ ಇರುವ ಬಾಂದವ್ಯ ಅಂತ ಎಲ್ಲರೂ ಭಾವಿಸಿದ್ದರು. .

ಏಪ್ರಿಲ್ 16ರಂದು ತನ್ನ ಮಗಳ ವಿವಾಹ ನಡೆಯಬೇಕಿತ್ತು. ಮದುವೆಗೆ ಎಲ್ಲರನ್ನೂ ಆಹ್ವಾನಿಸಲಾಗಿತ್ತು. ಶಾಪಿಂಗ್‌ಗೆ ಹೋಗುವುದಾಗಿ ಹೇಳಿ ಇಬ್ಬರೂ ಮನೆಯಿಂದ ಹೊರಟರು. ಇದಾದ ನಂತರ, ಅವರಿಬ್ಬರು ಮನೆಗೆ ವಾಪಸ್​ ಬರಲೇ ಇಲ್ಲ. ಅವರ ಬಗ್ಗೆ ಯಾವುದೇ ಸುದ್ದಿಯೂ ಸಿಗಲಿಲ್ಲ.

ಇಬ್ಬರನ್ನು ಫೋನ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ, ಅದು ಕೂಡ ಪ್ರಯೋಜನವಾಗಲಿಲ್ಲ. ಅನುಮಾನಗೊಂಡ ಹುಡುಗಿಯ ತಂದೆ, ಬೀರು ಪರಿಶೀಲಿಸಿದಾಗ ಚಿನ್ನ ಮತ್ತು ಹಣ ಕಾಣೆಯಾಗಿರುವುದು ಕಂಡುಬಂದಿದೆ. ಅಲ್ಲಿಗೆ ಇಬ್ಬರು ಓಡಿ ಹೋಗಿದ್ದಾರೆಂಬುದು ಖಚಿತವಾಗಿದೆ. ಈ ವಿಷಯ ಸದ್ಯ ಪಟ್ಟಣಾದ್ಯಂತ ಚರ್ಚೆಗೆ ಗ್ರಾಸವಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT