ಪ್ರಾತಿನಿಧಿಕ ಚಿತ್ರ 
ದೇಶ

'ಮನುಷ್ಯರ ಹಲ್ಲುಗಳು ಅಪಾಯಕಾರಿ ಆಯುಧವಲ್ಲ': ನಾದಿನಿ ಕಚ್ಚಿದ್ದಾಳೆಂದು ದೂರು ಸಲ್ಲಿಸಿದ್ದ ಮಹಿಳೆಗೆ ಹೈಕೋರ್ಟ್ ತರಾಟೆ

ಮಹಿಳೆಯ ದೂರಿನ ಮೇರೆಗೆ 2020ರ ಏಪ್ರಿಲ್‌ನಲ್ಲಿ ದಾಖಲಾಗಿರುವ ಎಫ್‌ಐಆರ್ ಪ್ರಕಾರ, ಜಗಳದ ಸಮಯದಲ್ಲಿ, ನಾದಿನಿ ಆಕೆಯನ್ನು ಕಚ್ಚಿದ್ದಾರೆ. ಈ ಅಪಾಯಕಾರಿ ಆಯುಧದಿಂದ ತನಗೆ ಹಾನಿಯಾಗಿದೆ ಎಂದು ಆರೋಪಿಸಿದ್ದಾರೆ.

ಮುಂಬೈ: ಮನುಷ್ಯರ ಹಲ್ಲುಗಳನ್ನು ಗಂಭೀರ ಹಾನಿಯನ್ನುಂಟುಮಾಡುವ ಅಪಾಯಕಾರಿ ಆಯುಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿರುವ ಬಾಂಬೆ ಹೈಕೋರ್ಟ್, ತನ್ನ ನಾದಿನಿ ಕಚ್ಚಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ದೂರಿನ ಮೇರೆಗೆ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಿದೆ.

ಹೈಕೋರ್ಟ್‌ನ ಔರಂಗಾಬಾದ್ ಪೀಠದ ನ್ಯಾಯಮೂರ್ತಿಗಳಾದ ವಿಭಾ ಕಂಕನ್ವಾಡಿ ಮತ್ತು ಸಂಜಯ್ ದೇಶಮುಖ್ ಅವರಿದ್ದ ಪೀಠವು, ದೂರುದಾರರು ಸಲ್ಲಿಸಿರುವ ವೈದ್ಯಕೀಯ ಪ್ರಮಾಣಪತ್ರಗಳು ಹಲ್ಲಿನಿಂದ ಉಂಟಾದ ಸರಳ ಗಾಯವನ್ನು ಮಾತ್ರ ತೋರಿಸುತ್ತವೆ ಎಂದು ಏಪ್ರಿಲ್ 4 ರಂದು ನೀಡಿದ ಆದೇಶದಲ್ಲಿ ತಿಳಿಸಿದ್ದಾರೆ.

ಮಹಿಳೆಯ ದೂರಿನ ಮೇರೆಗೆ 2020ರ ಏಪ್ರಿಲ್‌ನಲ್ಲಿ ದಾಖಲಾಗಿರುವ ಎಫ್‌ಐಆರ್ ಪ್ರಕಾರ, ಜಗಳದ ಸಮಯದಲ್ಲಿ, ನಾದಿನಿ ಆಕೆಯನ್ನು ಕಚ್ಚಿದ್ದಾರೆ. ಈ ಅಪಾಯಕಾರಿ ಆಯುಧದಿಂದ ತನಗೆ ಹಾನಿಯಾಗಿದೆ ಎಂದು ಆರೋಪಿಸಿದ್ದಾರೆ.

ಆರೋಪಿಗಳ ವಿರುದ್ಧ ಅಪಾಯಕಾರಿ ಆಯುಧಗಳಿಂದ ಹಾನಿ ಉಂಟುಮಾಡುವುದು, ಯಾರನ್ನಾದರೂ ನೋಯಿಸುವುದು ಮತ್ತು ಗಾಯಗೊಳಿಸುವುದು ಸೇರಿದಂತೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

'ಮನುಷ್ಯರ ಹಲ್ಲುಗಳನ್ನು ಅಪಾಯಕಾರಿ ಆಯುಧ ಎಂದು ಹೇಳಲು ಸಾಧ್ಯವಿಲ್ಲ' ಎಂದ ನ್ಯಾಯಾಲಯ, ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಿ ಎಫ್‌ಐಆರ್ ಅನ್ನು ರದ್ದುಗೊಳಿಸಿದೆ.

ಅಪಾಯಕಾರಿ ಆಯುಧವನ್ನು ಬಳಸಿ ಸಾವು ಅಥವಾ ಗಂಭೀರ ಹಾನಿಯನ್ನುಂಟುಮಾಡುವ ಪ್ರಕರಣವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 324ರ ಅಡಿಯಲ್ಲಿ ಬರುತ್ತದೆ. ಸದ್ಯದ ಪ್ರಕರಣದಲ್ಲಿ ದೂರುದಾರರ ವೈದ್ಯಕೀಯ ಪ್ರಮಾಣಪತ್ರಗಳು ಹಲ್ಲಿನ ಗುರುತುಗಳಿಂದ ಉಂಟಾದ ಸರಳ ಗಾಯವನ್ನು ಮಾತ್ರ ತೋರಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ.

ಸೆಕ್ಷನ್ 324ರ ಅಡಿಯಲ್ಲಿ ಅಪರಾಧ ಸಾಬೀತಾಗದಿದ್ದಾಗ, ಆರೋಪಿಯನ್ನು ವಿಚಾರಣೆ ಎದುರಿಸುವಂತೆ ಮಾಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ. ಹೀಗಾಗಿ, ಎಫ್‌ಐಆರ್ ರದ್ದುಗೊಳಿಸಲಾಗಿದೆ. ಆರೋಪಿ ಮತ್ತು ದೂರುದಾರರ ನಡುವೆ ಆಸ್ತಿ ವಿವಾದ ಇರುವಂತೆ ಕಂಡುಬರುತ್ತಿದೆ ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel