ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ 
ದೇಶ

ದೇಶ ವಿರೋಧಿ ಚಟುವಟಿಕೆ: ಮತ್ತೆ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್

ಸಂವಿಧಾನದ 311ನೇ ವಿಧಿಯನ್ನು ಅನ್ವಯಿಸುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಸಹಾಯಕ ವೈರ್‌ಲೆಸ್ ಆಪರೇಟರ್ ಆಗಿದ ಬಷರತ್ ಅಹ್ಮದ್ ಮಿರ್ ಮತ್ತು ಸಾರ್ವಜನಿಕ ಕಾರ್ಯ(ಆರ್ & ಬಿ) ಇಲಾಖೆಯಲ್ಲಿ ಹಿರಿಯ ಸಹಾಯಕರಾಗಿದ್ದ ಇಶ್ತಿಯಾಕ್ ಅಹ್ಮದ್ ಮಲಿಕ್ ಅವರನ್ನು ವಜಾಗೊಳಿಸಿದ್ದಾರೆ.

ಶ್ರೀನಗರ: ದೇಶ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಗುರುವಾರ ಇಬ್ಬರು ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.

ಸಿನ್ಹಾ ಅವರು ಸಂವಿಧಾನದ 311ನೇ ವಿಧಿಯನ್ನು ಅನ್ವಯಿಸುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಸಹಾಯಕ ವೈರ್‌ಲೆಸ್ ಆಪರೇಟರ್ ಆಗಿದ ಬಷರತ್ ಅಹ್ಮದ್ ಮಿರ್ ಮತ್ತು ಸಾರ್ವಜನಿಕ ಕಾರ್ಯ(ಆರ್ & ಬಿ) ಇಲಾಖೆಯಲ್ಲಿ ಹಿರಿಯ ಸಹಾಯಕರಾಗಿದ್ದ ಇಶ್ತಿಯಾಕ್ ಅಹ್ಮದ್ ಮಲಿಕ್ ಅವರನ್ನು ವಜಾಗೊಳಿಸಿದ್ದಾರೆ.

"ಈ ಇಬ್ಬರು ನೌಕರರು ರಾಜ್ಯದ ಹಿತಾಸಕ್ತಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದಾರೆ ಎಂಬುದು ಕಾನೂನು ಜಾರಿ ಮತ್ತು ಗುಪ್ತಚರ ಸಂಸ್ಥೆಗಳ ಗಮನಕ್ಕೆ ಬಂದಿದೆ. ಇದು ಭಯೋತ್ಪಾದನೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಸಾಬೀತುಪಡಿಸುತ್ತದೆ" ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಶ್ರೀನಗರದ ನಿವಾಸಿ ಬಷರತ್ ಅಹ್ಮದ್ ಮಿರ್ ಪಾಕಿಸ್ತಾನ ಗುಪ್ತಚರ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಏಜೆನ್ಸಿಗಳಿಂದ ಬಂದ ಹೆಚ್ಚು ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ವಜಾಗೊಳಿಸಲಾದ ಮತ್ತೊಬ್ಬ ಉದ್ಯೋಗಿ, ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ನಿವಾಸಿ ಇಶ್ತಿಯಾಕ್ ಅಹ್ಮದ್ ಮಲಿಕ್, ನಿಷೇಧಿತ ಕಾನೂನುಬಾಹಿರ ಸಂಘಟನೆಯಾದ ಜಮಾತ್-ಇ-ಇಸ್ಲಾಮಿಯ ಜಮ್ಮು ಮತ್ತು ಕಾಶ್ಮೀರ ಸಕ್ರಿಯ ಸದಸ್ಯ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್ ಮುಜಾಹಿದ್ದೀನ್‌ನ ಸಹಚರ ಎಂದು ಪಟ್ಟಿ ಮಾಡಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ