ಉಗ್ರ ರಾಣಾ 
ದೇಶ

26/11 ಮುಂಬೈ ಭಯೋತ್ಪಾದಕ ದಾಳಿ: ಮೋಸ್ಟ್‌ ವಾಂಟೆಡ್‌ ಉಗ್ರ 'ರಾಣಾ' ಇಂದು ಭಾರತಕ್ಕೆ; ತಿಹಾರ್ ಜೈಲಿಗೆ ರವಾನೆ?

ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿರುವ ತಹವ್ವೂರ್ ರಾಣಾನನ್ನು ಇಂದು ಬೆಳಿಗ್ಗೆ ಭಾರತಕ್ಕೆ ಹಸ್ತಾಂತರಿಸಲಾಗುತ್ತಿದೆ. ಆತನನ್ನು ಅಮೆರಿಕಾದಿಂದ ಭಾರತಕ್ಕೆ ಕರೆತರುವ ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿಯೇ ಬಂದಿಳಿಯಲಿದೆ. ಅಲ್ಲಿಂದ ತಿಹಾರ್ ಜೈಲಿಗೆ ಕರೆದೊಯ್ಯಲಾಗುತ್ತದೆ ಎಂದು ತಿಳಿದುಬಂದಿದೆ.

ನವದೆಹಲಿ: ಅಮೆರಿಕಾದಿಂದ ಗಡೀಪಾರು ಮಾಡಲಾಗುತ್ತಿರುವ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ಪ್ರಮುಖ ಆರೋಪಿ ತಹವ್ವೂರ್ ಹುಸೇನ್ ರಾಣಾ ಭಾರತ ತಲುಪದ ಕೂಡಲೇ ಆತನನ್ನು ತಿಹಾರ್ ಜೈಲಿನಲ್ಲಿರುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈಗಾಗಲೇ ದೆಹಲಿಯ ತಿಹಾಲ್ ಜೈಲಿನಲ್ಲಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿರುವ ತಹವ್ವೂರ್ ರಾಣಾನನ್ನು ಇಂದು ಬೆಳಿಗ್ಗೆ ಭಾರತಕ್ಕೆ ಹಸ್ತಾಂತರಿಸಲಾಗುತ್ತಿದೆ. ಆತನನ್ನು ಅಮೆರಿಕಾದಿಂದ ಭಾರತಕ್ಕೆ ಕರೆತರುವ ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿಯೇ ಬಂದಿಳಿಯಲಿದೆ. ಅಲ್ಲಿಂದ ತಿಹಾರ್ ಜೈಲಿಗೆ ಕರೆದೊಯ್ಯಲಾಗುತ್ತದೆ ಎಂದು ತಿಳಿದುಬಂದಿದೆ.

ಭಾರತಕ್ಕೆ ಬಂದ ನಂತರ, ತಹವ್ವೂರ್ ರಾಣಾನನ್ನು ಪಟಿಯಾಲ ಹೌಸ್‌ನಲ್ಲಿರುವ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ.

ಈ ಪ್ರಕರಣದಲ್ಲಿ ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲು ಎನ್‌ಐಎ ಕೋರಬಹುದು ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಎನ್‌ಐಎ ಪ್ರಧಾನ ಕಚೇರಿ ಮತ್ತು ತಿಹಾರ್ ಜೈಲಿನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ತಹವ್ವೂರ್ ರಾಣಾ ಪಾಕಿಸ್ತಾನ ಮೂಲದ ಕೆನಡಾದ ಪ್ರಜೆಯಾಗಿದ್ದಾನೆ. ಆತ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದು, ಡೇವಿಡ್ ಹೆಡ್ಲಿಗೆ ಪ್ರಯಾಣ ದಾಖಲೆಗಳನ್ನು ಒದಗಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದ. ಭಯೋತ್ಪಾದಕ ಡೇವಿಡ್ ಹೆಡ್ಲಿ ಮುಂಬೈನಲ್ಲಿ ನಂತರ ದಾಳಿ ನಡೆದ ಸ್ಥಳಗಳ ಪರಿಶೀಲನೆ ನಡೆಸಿದ್ದ. ಮುಂಬೈ ದಾಳಿಯಲ್ಲಿ ಆರು ಅಮೆರಿಕನ್ನರು ಸೇರಿದಂತೆ 166 ಜನರು ಸಾವನ್ನಪ್ಪಿದ್ದರು.

ಡಿಸೆಂಬರ್ 2011 ರಲ್ಲಿ ಸಲ್ಲಿಸಲಾದ ಎನ್‌ಐಎ ಆರೋಪಪಟ್ಟಿಯಲ್ಲಿ ತಹವ್ವೂರ್ ರಾಣಾ, ಡೇವಿಡ್ ಹೆಡ್ಲಿ ಮತ್ತು ಇತರ ಆರು ಜನರ ವಿರುದ್ಧ ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಿದ ಆರೋಪ ಹೊರಿಸಲಾಗಿತ್ತು. ಆರೋಪಪಟ್ಟಿಯಲ್ಲಿ 134 ಸಾಕ್ಷಿಗಳ ಹೇಳಿಕೆಗಳು, 210 ದಾಖಲೆಗಳು ಮತ್ತು 106 ಇಮೇಲ್‌ಗಳು ಸೇರಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT